Webdunia - Bharat's app for daily news and videos

Install App

ಬಸವಣ್ಣನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಯತ್ನಾಳ್‌ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಡಿಕೆಶಿ

Sampriya
ಭಾನುವಾರ, 1 ಡಿಸೆಂಬರ್ 2024 (17:05 IST)
ಬೆಂಗಳೂರು: ಬಸವಣ್ಣನವರಿಗೆ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಮಸಿ ಬಳಿಯುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಆಕ್ರೋಶ ಹೊರಹಾಕಿದರು.

ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಬಗ್ಗೆ ಹುಚ್ಚರಂತೆ ಮಾತನಾಡಿರುವ ಯತ್ನಾಳ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಅನೇಕ ಮಠಾಧೀಶರು ಕೂಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಪಕ್ಷದ ಚಿಂತನೆ. ಸಿದ್ದರಾಮಯ್ಯ ಅವರು ಮೊದಲ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವಣ್ಣ ಜಯಂತಿಯಂದು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿದ್ದು, ಬಸವಣ್ಣನವರ ಜಯಂತಿಗೆ ಶಕ್ತಿ ಕೊಟ್ಟಿದ್ದು, ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಯಾವ ಜನತಾದಳ, ಬಿಜೆಪಿ, ಜನಸಂಘವೂ ಈ ಕೆಲಸ ಮಾಡಿಲ್ಲ ಎಂದು ಹೇಳಿದರು.

ಯತ್ನಾಳ್ ಅವರಂತಹ ಮುತ್ತು ರತ್ನವನ್ನು ಬಿಜೆಪಿಯವರು ತಮ್ಮ ಬಳಿಯೇ ಇಟ್ಟುಕೊಳ್ಳಲಿ. ಇದು ಆ ಪಕ್ಷದ ಆಂತರಿಕ ವಿಚಾರ. ಅದಕ್ಕೆ ನಾವು ತಲೆ ಹಾಕುವುದಿಲ್ಲ ಎಂದರು.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments