Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನ ನೀಡುವಂತೆ ಧ್ವನಿ ಎತ್ತಿದ ಕಲ್ಯಾಣ ಕರ್ನಾಟಕದ ನಾಯಕರಿಗೆ ಬೆಂಬಲ ಸೂಚಿಸಿದ ಯತ್ನಾಳ್

ಸಚಿವ ಸ್ಥಾನ ನೀಡುವಂತೆ ಧ್ವನಿ ಎತ್ತಿದ ಕಲ್ಯಾಣ ಕರ್ನಾಟಕದ ನಾಯಕರಿಗೆ ಬೆಂಬಲ ಸೂಚಿಸಿದ ಯತ್ನಾಳ್
ವಿಜಯಪುರ , ಬುಧವಾರ, 5 ಫೆಬ್ರವರಿ 2020 (10:50 IST)
ವಿಜಯಪುರ : ನಾಳೆ ಸಚಿವ ಸಂಪುಟ ವಿಸ್ತರಣೆ ಹಿನ್ನಲೆ ಕಲ್ಯಾಣ ಕರ್ನಾಟಕಕ್ಕೆ ಸಚಿವ ಸ್ಥಾನ ನೀಡಲು ಅಲ್ಲಿನ ನಾಯಕರು  ಆಗ್ರಹಿಸಿದ್ದು, ಇದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ನಾಯಕರ ಧ್ವನಿಗೆ ನನ್ನ ಬೆಂಬಲವಿದೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಪ್ರಾದೇಶಿಕ ಸಮಾನತೆ ಇರಬೇಕು. ಸಚಿವ ಸ್ಥಾನ ವಂಚಿತ ಜಿಲ್ಲೆಗಳಿಗೂ ಸಚಿವ ಸ್ಥಾನ ನೀಡಬೇಕು. ಯಾರು ತ್ಯಾಗ ಮಾಡಬೇಕೋ ಅವರು ತ್ಯಾಗ ಮಾಡಲಿ ಎಂದು ಹೇಳಿದ್ದಾರೆ.


ಹಾಗೇ ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿ ಗಟ್ಟಿಯಾಗಲು ಸ್ಪಂದಿಸಲಿ. ರಾಜುಗೌಡ, ದತ್ತಾತ್ರೇಯ ಪಾಟೀಲ್ ರೇವೂರ್ ಸೇರಿದಂತೆ ಆ ಭಾಗದ ನಮ್ಮ ಶಾಸಕರ ಭಾವನೆಗಳಿಗೆ ಸ್ಪಂದಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಟೋಗೆ ಲಾರಿ ಡಿಕ್ಕಿ; ಆಟೋದಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವು