Webdunia - Bharat's app for daily news and videos

Install App

‘ತಾಕತ್ತಿದ್ದರೆ ಡಿಕೆಶಿ ಜೊತೆ ಯಾತ್ರೆ ಮಾಡಿ’

Webdunia
ಗುರುವಾರ, 13 ಅಕ್ಟೋಬರ್ 2022 (16:09 IST)
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕರ್ನಾಟಕ BJP ಟ್ವೀಟ್​​​ ಮಾಡಿ ಲೇವಡಿ ಮಾಡಿದೆ. ಮಾನ್ಯ ಸಿದ್ದರಾಮಯ್ಯರೇ ಜೋಡೊ ಎಂದರೆ ಕನ್ನಡದಲ್ಲಿ ಕೂಡುವುದು ಎಂದರ್ಥ. ನಿಮಗೆ ಒಂದಾಗಿರುವುದೇ ಗೊತ್ತಿಲ್ಲದ ಮೇಲೆ ಜೋಡೊ ಎಂದು ಏಕೆ ಆ ಹುಡುಗನನ್ನು ಕರೆದುಕೊಂಡು ಓಡುತ್ತಿದ್ದೀರಿ? ಎಂದು ಪ್ರಶ್ನೆ ಮಾಡಿದೆ. ಬುರುಡೆರಾಮಯ್ಯ ಎಂಬ ಹ್ಯಾಶ್​​ ಟ್ಯಾಗ್​​ನೊಂದಿಗೆ ಟ್ವೀಟ್​​ ಮಾಡಿರುವ ಬಿಜೆಪಿ, ನಮ್ಮ ಮುಖ್ಯಮಂತ್ರಿಗಳ ಧೈರ್ಯದ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರೇ, ನಿಮಗೆ ತಾಕತ್ತಿದ್ದರೆ KPCC ಅಧ್ಯಕ್ಷ DK ಶಿವಕುಮಾರ್​​​ ಅವರ ಜೊತೆ ಯಾತ್ರೆ ಮಾಡಿ. ನಿಮಗೆ ಧಮ್ ಇದ್ದರೆ KPCC ಅಧ್ಯಕ್ಷರ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂಬುದಾಗಿ ಹೇಳಿ ಎಂದು ಲೇವಡಿ ಮಾಡಿದೆ. ಸಿಎಂ ಆಗುವ ಆಸೆಯಿಂದ ಆ ಸಣ್ಣ ಹುಡುಗನ ಮಾತು ಕೇಳಿಕೊಂಡು ಸಿದ್ದರಾಮಯ್ಯ ರಸ್ತೆಯಲ್ಲಿ ಓಡುವುದು, ಬಸ್ಕಿ ಹೊಡೆಯುವುದು ನೋಡಿದಾಗಲೆಲ್ಲ ಅಯ್ಯೋ ಪಾಪ ಅನಿಸುತ್ತದೆ. ಬಿಜೆಪಿಯಲ್ಲಿ ಎಲ್ಲರೂ ಒಂದಾಗಿ ಯಾತ್ರೆ ಮಾಡುತ್ತಿರುವುದನ್ನು ನೋಡಿ ಬೀದಿ ಜಗಳವಾಡುವ ಕಾಂಗ್ರೆಸ್ ಪಕ್ಷಕ್ಕೆ ನಡುಕವುಂಟಾಗಿದೆ‌ಯೇ ಎಂದು ಪ್ರಶ್ನಿಸಿ ಅಪಹಾಸ್ಯ ಮಾಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments