Select Your Language

Notifications

webdunia
webdunia
webdunia
webdunia

ಯಶಸ್ವಿನಿ' ಯೋಜನೆ ಮರು ಜಾರಿ ಮಾಡಲು ಸಿಎಂ ನಿರ್ಧಾರ

ಯಶಸ್ವಿನಿ' ಯೋಜನೆ ಮರು ಜಾರಿ ಮಾಡಲು ಸಿಎಂ ನಿರ್ಧಾರ
ಬೆಂಗಳೂರು , ಭಾನುವಾರ, 3 ಫೆಬ್ರವರಿ 2019 (19:03 IST)
ಬೆಂಗಳೂರು : ರಾಜ್ಯದಲ್ಲಿ `ಯಶಸ್ವಿನಿ' ಯೋಜನೆಯನ್ನು ಮತ್ತೆ ಜಾರಿ ಮಾಡುವ ತೀರ್ಮಾನವನ್ನು ಸಿಎಂ ಕುಮಾರಸ್ವಾಮಿ ಪ್ರಕಟಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಸಂಯೋಜಿತ ಯೋಜನೆ ಬಗ್ಗೆ ಸಾರ್ವಜನಿಕರಲ್ಲಿ ಅಸಮಾಧಾನವಿದೆ. ಜನಸಾಮಾನ್ಯರ ಬೇಡಿಕೆಯಂತೆ, 2 ನೇ ಹಂತದ ಚಿಕಿತ್ಸೆಗಾಗಿ ಯಶಸ್ವಿನಿ ಯೋಜನೆಯನ್ನು ಮರು ಜಾರಿ ಮಾಡಲು ನಿರ್ಧರಿಸಲಾಗಿದ್ದು, ಬಜೆಟ್ ನಲ್ಲಿ ಈ ಉದ್ದೇಶಕ್ಕೆ ಅನುದಾನ ಮೀಸಲಿಡಲಾಗುವುದು’ ಎಂದು ಹೇಳಿದ್ದಾರೆ.


‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರದಿಂದ 200 ಕೋಟಿ ರೂ. ಅನುದಾನ ಮಾತ್ರ ಬರುತ್ತಿತ್ತು. ರಾಜ್ಯ ಸರ್ಕಾರ 800 ಕೋಟಿ ರೂ. ಭರಿಸುತ್ತಿದೆ. ರಾಜ್ಯ ದೊಡ್ಡ ಪ್ರಮಾಣದಲ್ಲಿ ಯೋಜನೆಯ ವೆಚ್ಚ ಭರಿಸುತ್ತಿದೆ. ಆದರೆ ಈ ಯೋಜನೆಗೆ ಕೇಂದ್ರದ ಹೆಸರಿಡಲಾಗುತ್ತಿದೆ’ ಎಂದು ಸಿಎಂ ಅಸಮಾಧಾನ ಹೊರಹಾಕಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ಗಂಗಾಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಕಳಪೆ ಸಾಮಾಗ್ರಿ ಸರಬರಾಜು ಮಾಡಿದವನ ತರಾಟೆಗೆ ತೆಗೆದುಕೊಂಡ ಕೆ.ಆರ್ ಪೇಟೆ ಶಾಸಕ