ಯಡಿಯೂರಪ್ಪ 23 ರ ನಂತರ ಸಿಎಂ!

Webdunia
ಭಾನುವಾರ, 12 ಮೇ 2019 (13:42 IST)
ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಭಾರಿಸುತ್ತದೆ. ಐದು ವರ್ಷ ದೇಶದಲ್ಲಿ ಮೋದಿ ಮಾಡಿದ ಸಾಧನೆ, ದೇಶದ ರಕ್ಷಣೆ, ಯಡಿಯೂರಪ್ಪ ಅವಧಿಯಲ್ಲಿ ಆದ ಅಭಿವೃದ್ಧಿ ಕೆಲಸಗಳು ಕೈ ಹಿಡಿಯಲಿವೆ ಅಂತ ಮಾಜಿ ಸಚಿವ ಹೇಳಿದ್ದಾರೆ.

ಮತ್ತೊಮ್ಮೆ ಬಿಜೆಪಿಯನ್ನ ಅಧಿಕಾರಕ್ಕೆ ತರಲು ಕುಂದಗೋಳ- ಚಿಂಚೋಳಿ ಎರಡು ಸ್ಥಾನವನ್ನು ಜನರು ಬಿಜೆಪಿಗೆ ಗೆಲ್ಲಿಸುತ್ತಾರೆ. ಕಳೆದ ಆರು ವರ್ಷದಲ್ಲಿ ರಾಜ್ಯವನ್ನು ಕೊಳ್ಳೆ ಹೊಡೆದವರು ಹಣ ಹಂಚಿಕೆ ಮಾಡುತ್ತಿದ್ದಾರೆ. ರಾಜಕೀಯ ಪಕ್ಷವಾಗಿ ಚುನಾವಣಾ ವ್ಯವಸ್ಥೆಯನ್ನ ಹದಗೆಡಿಸುತ್ತಿದ್ದಾರೆ. ಹಣ ಹಂಚಿಕೆ ಮಾಡಿ, ಸರಾಯಿ ಹಂಚಿಕೆ ಮಾಡಿ ಗೆಲ್ಲಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ದೂರಿದ್ದಾರೆ.

ರಾಜ್ಯದಲ್ಲಿ ಭೀಕರ ಬರ, ಕುಡಿಯುವ ನೀರಿನ‌ ಸಮಸ್ಯೆ ಇರುವಾಗ ಸಿಎಂ ರೆಸಾರ್ಟ್ ಸೇರಿದ್ದಾರೆ. 23 ನಂತರ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗ್ತಾರೆ. ಕಾಂಗ್ರೆಸ್ ದಿನದಿಂದ ದಿನಕ್ಕೆ ಅಸ್ತಿತ್ವಕ್ಕೆ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ಶಾಸಕರಿಗೆ ಭವಿಷ್ಯದ ಪ್ರಶ್ನೆ ಎದುರಾಗಿದೆ. ಹಾಗಾಗಿ ಅವರೆಲ್ಲ ಬಿಜೆಪಿಗೆ ಬರ್ತಾರೆ ಎಂದ್ರು.

ಜೆಡಿಎಸ್- ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಎದುರಾಗಿದೆ, ಅವರೆಲ್ಲ ಭವಿಷ್ಯ ರೂಪಿಸಿಕೊಳ್ಳಲು ಬಿಜೆಪಿಗೆ ಬರುತ್ತಿದ್ದಾರೆ ಅಂತ ಕಾರಜೋಳ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಕೃಷ್ಣಭೈರೇಗೌಡ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಚ್‌ ಡಿ ದೇವೇಗೌಡ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

ಮುಂದಿನ ಸುದ್ದಿ
Show comments