Webdunia - Bharat's app for daily news and videos

Install App

ಮುಖಾಮುಖಿಯಾದ ಬಿಎಸ್‌ವೈ, ಈಶು, ಬ್ರಿಗೇಡ್‌ಗೆ ಬೀಳುತ್ತಾ ಬ್ರೇಕ್?

Webdunia
ಗುರುವಾರ, 13 ಅಕ್ಟೋಬರ್ 2016 (14:06 IST)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆಗೆ ಸಂಬಂಧಿಸಿದಂತೆ ಸಾಕಷ್ಟು ಭಿನ್ನಾಭಿಪ್ರಾಯಗಳನ್ನು ಹೊಂದಿದ್ದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖಾಮುಖಿ ಭೇಟಿಯಾಗಿ ಚರ್ಚಿಸಿದ್ದಾರೆ.
ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಆಗಮಿಸಿದ್ದ ಕೆ.ಎಸ್.ಈಶ್ವರಪ್ಪನವರು ಬಿ.ಎಸ್.ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.
 
ಈ ವೇಳೆ ಈಶ್ವರಪ್ಪ ಅವರಿಗೆ ಅವರ ಪುತ್ರ ಕೆ.ಇ.ಕಾಂತೇಶ್ ಸಾಥ್ ನೀಡಿದರು. ಬಿ.ಎಸ್.ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಅವರು ಇವರಿಬ್ಬರನ್ನು ಆದರಿದಿಂದ ಬರ ಮಾಡಿಕೊಂಡರು. 
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಆರಂಭವಾದಗಿನಿಂದ ಪರಸ್ಪರ ಮುನಿಸಿಕೊಂಡು ಒಬ್ಬರ ವಿರುದ್ಧ ಒಬ್ಬರು ಕತ್ತಿ ಮಸೆಯುತ್ತಿದ್ದ ಬಿ.ಎಸ್.ಯಡಿಯೂರಪ್ಪ ಹಾಗೂ ಈಶ್ವರಪ್ಪನವರು ಪರಸ್ಪರ ಸುಮಾರು 30 ನಿಮಿಷಗಳ ಕಾಲ ಮಾತನಾಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments