Select Your Language

Notifications

webdunia
webdunia
webdunia
webdunia

ಬಿಜೆಪಿ ಅಧಿಕಾರಕ್ಕೇ ಬಂದಿಲ್ಲ, ಅದಾಗಲೇ ಸಿಎಂ ಸ್ಥಾನಕ್ಕಾಗಿ ಯಡ್ಡಿ, ಈಶು ಪೈಪೋಟಿ

ಬಿಜೆಪಿ ಅಧಿಕಾರಕ್ಕೇ ಬಂದಿಲ್ಲ, ಅದಾಗಲೇ ಸಿಎಂ ಸ್ಥಾನಕ್ಕಾಗಿ ಯಡ್ಡಿ, ಈಶು ಪೈಪೋಟಿ
ಬೆಂಗಳೂರು , ಮಂಗಳವಾರ, 10 ಜನವರಿ 2017 (14:55 IST)
ರಾಜ್ಯದಲ್ಲಿ ಇನ್ನೂ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿಲ್ಲ. ಈಗಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿತ್ತಾಡುತ್ತಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಬಿಜೆಪಿ ಪಾಳಯದಲ್ಲಿ ಈಗಲೇ ಕಿತ್ತಾಟ ಶುರುವಾಗಿದೆ. ಅಧಿಕಾರಕ್ಕಾಗಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೆ.ಎಸ್.ಈಶ್ವರಪ್ಪ ಕಾದಾಡುತ್ತಿದ್ದಾರೆ. ಇನ್ನೂ ಅಧಿಕಾರಕ್ಕೆ ಬಂದಿಲ್ಲ. ಸಿಎಂ ಸ್ಥಾನಕ್ಕಾಗಿ ಕಿತ್ತಾಡುತಿದ್ದಾರೆ. ಇನ್ನೂ ಅಧಿಕಾರಕ್ಕೆ ಬಂದ ಮೇಲೆ ಯಾವ ರೀತಿ ಕಿತ್ತಾಡ್ತಾರೋ ಎಂದು ಪ್ರಶ್ನಿಸಿದರು.
 
ಕೆ.ಎಸ್.ಈಶ್ವರಪ್ಪ ಅವರಿಗೆ ಹಿಂದ್‌ನೂ ಗೊತ್ತಿಲ್ಲ. ಬ್ರಿಗೇಡ್ ಬಗ್ಗೆನೂ ಗೊತ್ತಿಲ್ಲ. ಸುಮ್ನೆ ಬ್ರಿಗೇಡ್ ಕಟ್ಟಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
 
ರಾಜ್ಯ ಬಿಜೆಪಿ ಪಾಳಯದಲ್ಲಿ ಕೇವಲ ಈ ಇಬ್ಬರು ನಾಯಕರು ಮಾತ್ರ ಕಿತ್ತಾಡುತ್ತಿಲ್ಲ. ಉಳಿದ ನಾಯಕರು ಸಹ ಗುಂಪುಗಾರಿಕೆ ಮಾಡುತ್ತಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನಲ್ಲಿ ಬ್ರಿಗೇಡ್ ಪಿನಾಕಲ್ ಲೋಕಾರ್ಪಣೆ