Webdunia - Bharat's app for daily news and videos

Install App

ಕುಮಾರಸ್ವಾಮಿ ತವರು ಜಿಲ್ಲೆಗೆ ಯಡಿಯೂರಪ್ಪ ಬಂಪರ್ ಕೊಡುಗೆ ನೀಡಿದ್ಯಾಕೆ?

Webdunia
ಗುರುವಾರ, 5 ಮಾರ್ಚ್ 2020 (17:30 IST)
ರಾಜ್ಯ ಬಜೆಟ್ ನಲ್ಲಿ ಮಾಜಿ ಸಿಎಂ ತವರು ಜಿಲ್ಲೆಗೆ ಹಾಲಿ ಸಿಎಂ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.

ರೇಷ್ಮೆ ನಾಡು ರಾಮನಗರ ಜಿಲ್ಲೆಯಲ್ಲಿ ರೇಷ್ಮೆಯ ಉಪ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಜಿಲ್ಲೆಯಲ್ಲಿನ ’ಕಣ್ವ ಫಾರ್ಮ್’ನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ರೇಷ್ಮೆ ಹುಳು ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಹೀಗಂತ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2020-21ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ ಆಯವ್ಯಯದಲ್ಲಿ ರಾಮನಗರ ಜಿಲ್ಲೆಯಲ್ಲಿ ಪ್ರತಿ ದಿನ 30 ರಿಂದ 32 ಮೆಟ್ರಿಕ್ ಟನ್ ರೇಷ್ಮೆ ಪೊರೆ ಹುಳವನ್ನು ಸಂಸ್ಕರಿಸಲು ಅನುವಾಗುವಂತಹ ರೇಷ್ಮೆ ಹುಳು ಸಂಸ್ಕರಣಾ ಘಟಕವನ್ನು ಸ್ಥಾಪಿಸಲಾಗುವುದು. ಇದರಿಂದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ (ರೀಲರ್) ಅಧಿಕ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ಇಡೀ ದೇಶದಲ್ಲಿ ’ವಿದ್ಯುತ್ ವಾಹನ ಮತ್ತು ಇಂಧನ ಶೇಖರಣಾ ನೀತಿ’ಯನ್ನು ಘೋಷಿಸಿರುವ ಕರ್ನಾಟಕ ರಾಜ್ಯ ಇದರ ಮೊದಲ ಹಂತವಾಗಿ ರಾಮನಗರದ ಹಾರೋಹಳ್ಳಿಯ 5 ನೇ ಹಂತದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗಾರಿಕಾ ಪ್ರದೇಶದಲ್ಲಿ ʼಎಲೆಕ್ಟ್ರಿಕ್ ವೆಹಿಕಲ್ಸ್ ಮತ್ತು ಎನರ್ಜಿ ಸ್ಟೋರೇಜ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’ ಅನ್ನು ಸ್ಥಾಪಿಸಲು ಒತ್ತು ನೀಡಿದೆ. ಇದಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು 2020-21ನೇ ಸಾಲಿನ ಆಯವ್ಯಯದಲ್ಲಿ ಒದಗಿಸಲಾಗುತ್ತಿದೆ ಎಂದು ಈ ಬಾರಿಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments