Webdunia - Bharat's app for daily news and videos

Install App

ರೈಗೆ ಗೃಹಸಚಿವ ಖಾತೆ: ಬಿಜೆಪಿ ನಾಯಕರ ತುರ್ತುಸಭೆ ಕರೆದ ಯಡಿಯೂರಪ್ಪ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (15:24 IST)
ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ಗೃಹ ಸಚಿವ ಖಾತೆ ನೀಡಿದಲ್ಲಿ ಹೋರಾಟ ನಡೆಸುವುದಾಗಿ ಘೋಷಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದು ಹೋರಾಟದ ರೂಪರೇಷೆ ರೂಪಿಸಿಲು ಬಿಜೆಪಿ ನಾಯಕರು ತುರ್ತುಸಭೆ ಕರೆದಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರು ತುರ್ತು ಸಭೆಯನ್ನು ಸಂಜೆ ಐದು ಗಂಟೆಗೆ ಕರೆದಿದ್ದಾರೆ.
 
ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಭಾಗಿಯಾಗಲಿದ್ದು, ಮುಂದೆ ಯಾವ ರೀತಿ ಹೋರಾಟ ಹಮ್ಮಿಕೊಳ್ಳಬೇಕು ಎನ್ನುವ ಬಗ್ಗೆ ಸಭೆ ನಿರ್ಧರಿಸಲಿದೆ ಎನ್ನಲಾಗಿದೆ.
 
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಶಾಲೆಗೆ ಸರಕಾರ ಅನುದಾನ ಕಡಿತಗೊಳಿಸುವಲ್ಲಿ ಸಚಿವ ರಮಾನಾಥ್ ರೈ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. 
 
ರಾಜ್ಯ ಸರಕಾರದ ವಿರುದ್ಧ ತೀವ್ರ ಹೋರಾಟ ನಡೆಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಇದೀಗ ಅಮಿತ್ ಶಾ ಆದೇಶದಂತೆ ಉಗ್ರಸ್ವರೂಪದ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments