Publish Date: Wed, 27 Feb 2019 (14:36 IST)
Updated Date: Wed, 27 Feb 2019 (14:37 IST)
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನವನ್ನು ಸಿದ್ದರಾಮಯ್ಯ ಆಚರಣೆ ಮಾಡಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮಂಡ್ಯದ ಕಾಳಿಕಾಂಭ ದೇವಾಲಯದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಲಾಯಿತು. ಬಿಜೆಪಿ ಮುಖಂಡರಿಂದ ವಿಶೇಷ ರೀತಿ ಹುಟ್ಟುಹಬ್ಬ ಆಚರಣೆ ನಡೆಯಿತು.
ಕೂಲಿ ಕಾರ್ಮಿಕರ ಪಾದ ತೊಳೆದು ಪೂಜೆ ಸಲ್ಲಿಸಿ ಸನ್ಮಾನ ಮಾಡಲಾಯಿತು. ವಿಶೇಷ ರೀತಿಯಲ್ಲಿ ಯಡಿಯೂರಪ್ಪ ಹುಟ್ಟು ಹಬ್ಬಆಚರಣೆ ಮಾಡಲಾಯಿತು. ಇದರಲ್ಲಿ ಬಿಜೆಪಿ ಮುಖಂಡರಾದ ಸಿದ್ದರಾಮಯ್ಯ, ನಾಗಣ್ಣಗೌಡ ಸೇರಿದಂತೆ ಮತ್ತಿತರ ಮುಖಂಡರು ಭಾಗಿಯಾಗಿದ್ದರು.