Webdunia - Bharat's app for daily news and videos

Install App

ಧಾರಾವಾಹಿಯಂತೆ ಸಿದ್ದರಾಮಯ್ಯ, ಪರಮೇಶ್ವರ ಕಟ್ಟಳೆಗಳು ಇವೆ ಎಂದ ಬಿಎಸ್ವೈ

Webdunia
ಗುರುವಾರ, 27 ಡಿಸೆಂಬರ್ 2018 (15:55 IST)
ರಾಜ್ಯ ಸರಕಾರದ ಮಂತ್ರಿ ಮಂಡಲ ವಿಸ್ತರಣೆ ಸಿದ್ದರಾಮಯ್ಯ ಹಾಗೂ ಪರಮೇಶ್ವರರ ಕಟ್ಟಳೆಗಳು ಧಾರಾವಾಹಿಯಂತೆ ಇವೆ, ಇದರಿಂದ ಅಭಿವೃದ್ಧಿ ಹಿನ್ನೆಡೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕೆ ಮಾಡಿದ್ದಾರೆ.

ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಬರಗಾಲದ ಬಗ್ಗೆ ನಾವು ವಿಸ್ತಾರವಾದ ಚರ್ಚೆ ಮಾಡಿ ರಾಜ್ಯದ ಗಮನ ಸೆಳೆದಿದ್ದೇವೆ. ಅಧಿವೇಶನದಲ್ಲಿ ಬರಗಾಲ ಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಬೇಕಿತ್ತು. ಆದರೆ ಇವಾಗ ಮಾಡಿದ್ದಾರೆ. ಕರ್ನಾಟಕದಲ್ಲಿ 157 ತಾಲೂಕುಗಳು ಬರಗಾಲಕ್ಕೆ ತುತ್ತಾಗಿವೆ. ಸಂಪುಟ ವಿಸ್ತರಣೆ ಕಚ್ಚಾಟದಲ್ಲಿ ರಾಜ್ಯದ ಅಭಿವೃದ್ಧಿ ಹಿನ್ನೆಡೆಯಾಗುತ್ತಿದೆ ಎಂದರು.

ಮೈತ್ರಿ ಸರ್ಕಾರದ ಕಚ್ಚಾಟದಿಂದ ಜನ ಬೇಸತ್ತಿದ್ದಾರೆ. ಇದು ನಾಡಿನ ಜನರಿಗೆ ಮಾಡಿದ ದ್ರೋಹ. ಈಗಲಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಸರ್ಕಾರ ಚರ್ಚಿಸಬೇಕು. ಮಂತ್ರಿ ಪಟ್ಟ ಯಾರಿಗಾದರೂ ಕೊಡಲಿ, ಇದರ ಕಿತ್ತಾಟದಲ್ಲಿ ರಾಜ್ಯ ಅಭಿವೃದ್ಧಿ ಹಿನ್ನೆಡೆಯಾಗುತ್ತೆ ಎಂಬ ನೋವು ನಮಗಿದೆ ಎಂದರು.

ಸಮ್ಮಿಶ್ರ ಸರ್ಕಾರಕ್ಕೆ ಯಾರ ಧ್ವನಿಯೂ ಕೇಳಿಸಿಕೊಳ್ಳುವ ಕಿವಿ ಇಲ್ಲ. ಅವರದ್ದೇ ಆದ ಅರಾಜಕತೆ ಜಂಜಾಟದಲ್ಲಿ ತಲ್ಲೀನರಾಗಿದ್ದಾರೆ. ಅವರಿಗೆ ಕುರ್ಚಿ ಹಾಗು ಖಾತೆ ಉಳಿಸಿಕೊಳ್ಳುವುದು ಮುಖ್ಯವಾಗಿದೆ. ಇದರಲ್ಲೇ ಅವರು ತಲ್ಲೀನರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಬರ ಪೀಡಿತ ಪ್ರದೇಶಗಳಿಗೆ ಸಿಎಂ ಹಾಗೂ ಉಸ್ತುಅವರಿ ಸಚಿವರುಗಳು ಭೇಟಿ‌ ನೀಡಿಲ್ಲ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರಿಗೆ ಅವರೆ ಪ್ರಶ್ನೆ ಮಾಡಿಕೊಳ್ಳಬೇಕು ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುಜರಾತ್‌ನಲ್ಲಿ ರೋಡ್‌ಶೋನಲ್ಲಿ ಮೋದಿಗೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್‌ ಸೋಫಿಯಾ ಕುಟುಂಬಸ್ಥರು

Mandya Accident: ಸಂಚಾರಿ ಪೊಲೀಸರ ಯಡವಟ್ಟಿನಿಂದ ಮಂಡ್ಯದಲ್ಲಿ ಮೂರು ವರ್ಷದ ಬಾಲಕಿ ಸಾವು

ಉಕ್ರೇನ್‌ ಮೇಲೆ ರಷ್ಯಾ ಡ್ರೋನ್ ದಾಳಿ ಬೆನ್ನಲ್ಲೇ ಕೆರಳಿ ಕೆಂಡವಾದ ಟ್ರಂಪ್‌: ಪುಟಿನ್ ಹುಚ್ಚ ಎಂದ ಅಮೆರಿಕ ಅಧ್ಯಕ್ಷ

Covid: ಇನ್ನೇನು ಶಾಲೆ ಶುರುವಾಯ್ತು ಎನ್ನುವ ಖುಷಿಯಲ್ಲಿದ್ದ ಮಕ್ಕಳಿಗೆ ಬ್ಯಾಡ್ ನ್ಯೂಸ್

Dinesh gundu rao: ಲಾಕ್ ಡೌನ್ ಮಾಡೋದು ನಿಮಗಿಷ್ಟಾನಾ, ನಾಳೆನೇ ಅನೌನ್ಸ್ ಮಾಡ್ತೀನಿ

ಮುಂದಿನ ಸುದ್ದಿ
Show comments