Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ನಮ್ಮನ್ನ ಮಂತ್ರಿ ಮಾಡೇ ಮಾಡುತ್ತಾರೆ- ಮಹೇಶ್ ಕುಮಟಳ್ಳಿ ವಿಶ್ವಾಸ

ಯಡಿಯೂರಪ್ಪ ನಮ್ಮನ್ನ ಮಂತ್ರಿ ಮಾಡೇ ಮಾಡುತ್ತಾರೆ- ಮಹೇಶ್ ಕುಮಟಳ್ಳಿ ವಿಶ್ವಾಸ
ಬೆಂಗಳೂರು , ಶನಿವಾರ, 1 ಫೆಬ್ರವರಿ 2020 (12:29 IST)
ಬೆಂಗಳೂರು : ನಾನು ಮಂತ್ರಿಯಾಗೋದು ಖಚಿತ. ಯಡಿಯೂರಪ್ಪ ನಮ್ಮನ್ನ ಮಂತ್ರಿ ಮಾಡೇ ಮಾಡುತ್ತಾರೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಹೈಕಮಾಂಡ್ ಗೆದ್ದ 10 ಶಾಸಕರಿಗೆ ಮಾತ್ರ ಮಂತ್ರಿಗಿರಿ ಕೊಡುವುದಾಗಿ ಹೇಳಿದ್ದಾರೆ.  ಹೀಗಾಗಿ ಮಹೇಶ್ ಕುಮಟಳ್ಳಿಗೆ ಮಂತ್ರಿ ಸ್ಥಾನ ಸಿಗುವುದು ಡೌಟ್ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಮಹೇಶ್ ಕುಮಟ್ಟಳ್ಳಿ, ಯಡಿಯೂರಪ್ಪ ಕೊಟ್ಟ ಮಾತು ಯಾವತ್ತು ತಪ್ಪಿಲ್ಲ. ಪ್ರಾಣ ಬೇಕಾದರೂ ಬಿಡುತ್ತಾರೆ.


ಚುನಾವಣೆ ಪ್ರಚಾರದ ವೇಳೆ ಜನರ ಮುಂದೆಯೇ ನನ್ನನ್ನು ಮಂತ್ರಿ ಮಾಡೋದಾಗಿ ಹೇಳಿದ್ದಾರೆ. ಆದ್ದರಿಂದ ಅವರು  ನಮ್ಮನ್ನ ಮಂತ್ರಿ ಮಾಡೇ ಮಾಡುತ್ತಾರೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

2020-21ನೇ ಸಾಲಿನ ಬಜೆಟ್ ಮಂಡನೆ; ಕೃಷಿಗೆ ಮಹತ್ತರ ಕೊಡುಗೆ