Select Your Language

Notifications

webdunia
webdunia
webdunia
webdunia

ಬಿ.ಎಸ್. ಯಡಿಯೂರಪ್ಪ ರೈತ ವಿರೋಧಿ: ಸಿಎಂ ಸಿದ್ದರಾಮಯ್ಯ

ಬಿ.ಎಸ್. ಯಡಿಯೂರಪ್ಪ ರೈತ ವಿರೋಧಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 29 ಜೂನ್ 2017 (15:44 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರೈತ ವಿರೋಧಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯ ಸರಕಾರ ಬರಗಾಲದ ಪರಿಸ್ಥಿತಿಯನ್ನು ಅರಿತು ರೈತರ ಸಾಲವನ್ನು ಮನ್ನಾ ಮಾಡಿದೆ. ಕೇಂದ್ರ ಸರಕಾರ ರಾಜ್ಯದ ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಯಡಿಯೂರಪ್ಪನವರಿಗೆ ರಾಜ್ಯದ ರೈತರ ಬಗ್ಗೆ ನಿಜವಾದ ಕಾಳಜಿಯಿದ್ದಲ್ಲಿ ಕೇಂದ್ರದಲ್ಲಿರುವ ಮೋದಿ ಸರಕಾರದಿಂದ ಸಾಲ ಮನ್ನಾಗೆ ಒತ್ತಡ ಹೇರುತ್ತಿದ್ದರು. ಆದರೆ, ಬಿಜೆಪಿ ನಾಯಕರು ಕೇವಲ ಸರಕಾರವನ್ನು ಟೀಕಿಸುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ರೈತರ ಪರ ,ಬಡವರ ಪರ, ಶೋಷಿತರ ಪರ ಎಂದು ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ನೇತೃತ್ವದ ಸರಕಾರ ಕೇವಲ ಕೈಗಾರಿಕೋದ್ಯಮಿಗಳ ಪರವಾಗಿದೆ ಎನ್ನುವುದು ದೇಶದ ಜನತೆಗೆ ಗೊತ್ತಾಗಿದೆ. ಕೈಗಾರಿಕೋದ್ಯಮಿಗಳ ಸಾಲ ಮನ್ನಾ ಮಾಡುವ ಮೋದಿ, ರೈತರ ಸಾಲ ಮನ್ನಾ ಮಾಡಲು ಯಾಕೆ ಮುಂದಾಗುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಚಾಮುಂಡೇಶ್ವರಿ ಕ್ಷೇತ್ರದಿಂದ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?