Webdunia - Bharat's app for daily news and videos

Install App

ಬಿಜೆಪಿ ಭಿನ್ನಮತ- ಇರಿಸು ಮುರಿಸು ಅನುಭವಿಸಿದ ಯಡಿಯೂರಪ್ಪ

Webdunia
ಗುರುವಾರ, 7 ಡಿಸೆಂಬರ್ 2017 (18:14 IST)
ಔರಾದ್‌ ವಿಧಾನಸಭಾ ಕ್ಷೇತ್ರದಲ್ಲಿ  ಗುರುವಾರ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಿನ್ನಮತ ಮತ್ತೆ ಪ್ರತಿಧ್ವನಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಇರಿಸು ಮುರಿಸು ಅನುಭವಿಸಿದರು.
 
ಶಾಸಕ ಪ್ರಭು ಚೌಹಾಣ್‌ ಮತ್ತು ಕಳೆದ ಬಾರಿ  ಕೆಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸೋತಿದ್ದ ಧಾನಾಜಿ ಜಾಧವ್‌ ಅವರೊಳಗಿನ ಭಿನ್ನಮತ ಸ್ಫೋಟಗೊಂಡು ಬಹಿರಂಗವಾಗಿ ವಾಗ್ವಾದ ನಡೆದು ತೀವ್ರ ಉದ್ವಿಗ್ನ ಸ್ಥಿತಿಗೆ ಕಾರಣವಾಯಿತು.
 
ಯಡಿಯೂರಪ್ಪ ಅವರು ವೇದಿಕೆಯಲ್ಲಿದ್ದಾಗಲೇ ಪರಸ್ಪರ ಧಿಕ್ಕಾರಗಳನ್ನು ಕೂಗಲಾಯಿತು. ಧಾನಾಜಿ ಅವರ ನೂರಾರು ಬೆಂಬಲಿಗರು ಆಗಮಿಸಿ  ಶಾಸಕ ಚೌಹಾಣ್‌ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಸಮಾರಂಭ ಗೊಂದಲದ ಗೂಡಾಯಿತು.
 
ಯಡಿಯೂರಪ್ಪ ಅವರು ವೇದಿಕೆಯಲ್ಲಿದ್ದಾಗಲೇ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೆ ಪಕ್ಷದಿಂದಲೆ ಹೊರ ಹಾಕುವುದಾಗಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಸಂಸದ ಭಗವಂತ್‌ ಖೂಬಾ ಅವರನ್ನು ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments