Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ಜೊತೆಗಿರುವವರು ಸರಿಯಿಲ್ಲ : ಬಿಜೆಪಿ ಮುಖಂಡ ಸೊಗಡು ಶಿವಣ್ಣ

ಬಿ.ಎಸ್.ಯಡಿಯೂರಪ್ಪ
ತುಮಕೂರು , ಶನಿವಾರ, 2 ಜುಲೈ 2016 (13:13 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಳ್ಳೆಯವರು ಆದರೆ, ಅವರ ಜೊತೆಗಿರುವವರು ಸರಿಯಿಲ್ಲ ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಹೇಳಿದ್ದಾರೆ.
 
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ .ಯಾರನ್ನು ಚರ್ಚಿಸದೆ ಪದಾಧಿಕಾರಿಗಳ ನೇಮಕ ಮಾಡಿರುವುದು ಸೂಕ್ತ ಕ್ರಮವಲ್ಲ. ರಾಜ್ಯದ ಎಲ್ಲಾ ಕಡೆಯೂ ಇದೇ ರೀತಿ ಆಗಿರುವುದರಿಂದ ಭಿನ್ನಮತ ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ.
 
ರಾಜ್ಯದಾಂತ್ಯ ಇರುವ ಬಿಜೆಪಿ ಕಾರ್ಯಕರ್ತರು ತಮ್ಮ ನೋವನ್ನು ಈಶ್ವರಪ್ಪರೊಂದಿಗೆ ಹಂಚಿಕೊಂಡಿದ್ದಾರೆ. ನಾವು ಪಕ್ಷದಲ್ಲಿ ಭಿನ್ನಮತ ಚಟುವಟಿಕೆ ಮಾಡುತ್ತಿಲ್ಲ. ಅರ್ಹರಾದ ಕಾರ್ಯಕರ್ತರಿಗೆ ನ್ಯಾಯ ಕೊಡಿಸಿ ಎಂದು ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.
 
ಪದಾಧಿಕಾರಿಗಳ ನೇಮಕ ಪಟ್ಟಿಯಲ್ಲಿ ಅನೇಕ ಗೊಂದಲಗಳಿವೆ. ತುಮಕೂರಿನಲ್ಲಿ ಒಂದೇ ಕುಟುಂಬದ ಇಬ್ಬರಿಗೆ ಪದಾಧಿಕಾರಿಗಳ ಸ್ಥಾನ ನೀಡಲಾಗಿದೆ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಜ್ಯೋತಿ ಗಣೇಶ್ ಅವರಿಗೆ ನೀಡಲಾಗಿದ್ದರೆ ಅವರ ಸಂಬಂಧಿಗೆ ಮತ್ತೊಂದು ಪದಾಧಿಕಾರಿ ಸ್ಥಾನ ನೀಡಲಾಗಿದೆ.ಇಂತಹ ಗೊಂದಲಗಳು ರಾಜ್ಯದಾದ್ಯಂತ ಕಂಡು ಬಂದಿವೆ ಎಂದರು.
 
ಯಡಿಯೂರಪ್ಪ ಅವರು ಕೂಡಲೇ ಪದಾಧಿಕಾರಿಗಳ ಪಟ್ಟಿಯನ್ನು ರದ್ದುಗೊಳಿಸಿ, ನೂತನ ಪದಾಧಿಕಾರಿಗಳ ಪಟ್ಟಿಯನ್ನು ಕೋರ್ ಕಮಿಟಿಯಲ್ಲಿ ಚರ್ಚಿಸಿ ಅಂತಿಮಗೊಳಿಸುವುದು ಸೂಕ್ತ ಎಂದು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಸಲಹೆ ನೀಡಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ಮಹಿಳೆಯರ ಮೇಲೆ 12 ಜನರಿಂದ ಸಾಮೂಹಿಕ ಅತ್ಯಾಚಾರ