Webdunia - Bharat's app for daily news and videos

Install App

ಕಿಕ್ ಬ್ಯಾಕ್ ಪ್ರಕರಣದಲ್ಲಿ ಖುಲಾಸೆ: ಯಡಿಯೂರಪ್ಪ ಬಿಗ್ ರಿಲೀಫ್

Webdunia
ಬುಧವಾರ, 26 ಅಕ್ಟೋಬರ್ 2016 (11:13 IST)
ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪ ಖುಲಾಸೆಗೊಂಡಿದ್ದು, ಮಾಜಿ ಮುಖ್ಯಮಂತ್ರಿಗೆ ಬಿಗ್ ರಿಲೀಫ್ ಸಿಕ್ಕಿದೆ.

 
ಯಡಿಯೂರಪ್ಪ, ಅವರ ಪುತ್ರರಾದ ಬಿ. ವೈ ರಾಘವೇಂದ್ರ, ಬಿ.ವೈ ವಿಜಯೇಂದ್ರ, ಅಳಿಯ ಆರ್. ಎನ್ ಸೋಹನ್ ಕುಮಾರ್, ಜಿಂದಾಲ್ ಕಂಪನಿ ಅಧಿಕಾರಿಗಳು ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳು ದೋಷಮುಕ್ತರೆಂದು ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ.
 
ಸಿಬಿಐ ನ್ಯಾಯಾಲಯದ ಜಡ್ಜ್ ಆರ್. ಬಿ ಧರ್ಮಗೌಡರ್ ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು ಯಡ್ಡಿ ನಿದ್ದೆಗೆಡಿಸಿದ್ದ ಆಪಾದನೆಯಿಂದ ಅವರನ್ನು ಮುಕ್ತಗೊಳಿಸಿದ್ದಾರೆ. ಈ ಹಿಂದೆ ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಕಟಕಟೆಯಲ್ಲಿ  ಬಿಕ್ಕಳಿಸಿದ್ದ ಯಡ್ಡಿ ಇಂದು ಅದೇ ನ್ಯಾಯಾಲಯದಲ್ಲಿ ವಿಜಯನದ ನಗು ಬೀರಿದ್ದಾರೆ. 
 
ಸುಮಾರು 400ಪುಟಗಳ ತೀರ್ಪಿನ ಮುಖ್ಯಾಂಶಗಳನ್ನು ಓದಿದ ನ್ಯಾಯಮೂರ್ತಿ, ಬಿಎಸ್‌ವೈ ಸೇರಿದಂತೆ ಎಲ್ಲ 13 ಆರೋಪಿಗಳ ವಿರುದ್ಧದ ಆರೋಪಗಳನ್ನು ಸಾಬೀತು ಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದಿದ್ದಾರೆ.
 
ತೀರ್ಪು ಪ್ರಕಟಗೊಳ್ಳುವ ಸಂದರ್ಭದಲ್ಲಿ ಬಿಎಸ್‌ವೈ, ಪುತ್ರರು, ಅಳಿಯ, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಜಿಂದಾಲ್ ಸಂಸ್ಥೆ ಅಧಿಕಾರಿಗಳು, ಬಿಎಸ್‌ವೈ ಆಪ್ತ ರೇಣುಕಾಚಾರ್ಯ, ಅಪಾರ ಬೆಂಬಲಿಗರು ಸ್ಥಳದಲ್ಲಿ ಹಾಜರಿದ್ದರು. 
 
ಪ್ರೇರಣಾ ಟ್ರಸ್ಟ್‌ಗೆ 20 ಕೋಟಿ ರು. ಕಿಕ್ ಬ್ಯಾಕ್ ಪಡೆದ ಆರೋಪ ಯಡಿಯೂರಪ್ಪ  ಎದುರಿಸುತ್ತಿದ್ದರು. ಅದರ ಜತೆಗೆ ಇನ್ನೂ ಐದು ಪ್ರಕರಣ ಅವರನ್ನು ಸುತ್ತಿಕೊಂಡಿತ್ತು.  ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಆರ್.ಬಿ. ಧರ್ಮೇಗೌಡರ್ ಮುಂದೆ ಇಂದು ಪ್ರಕರಣಗಳದ ವಿಚಾರಣೆ ನಡೆದು ಎಲ್ಲಾ ಆರೋಪಗಳಿಂದ ಯಡಿಯೂರಪ್ಪ ಖುಲಾಸೆಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments