Webdunia - Bharat's app for daily news and videos

Install App

ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ ಎಂದ ಬೊಮ್ಮಾಯಿ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (10:41 IST)
ಕಲಬುರ್ಗಿ : 'ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಕಾರಣರಾದ ಸರ್ದಾರ್ ವಲ್ಲಭಭಾಯಿ ಪಟೇಲರು ಪ್ರಥಮ ಉಕ್ಕಿನ ಮನುಷ್ಯರಾದರೆ, ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ ಬಿ.ಎಸ್. ಯಡಿಯೂರಪ್ಪ ಇನ್ನೊಬ್ಬ ಉಕ್ಕಿನ ಮನುಷ್ಯ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.
Photo Courtesy: Google

ಶುಕ್ರವಾರ ಇಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.
'ಯಡಿಯೂರಪ್ಪ ಅವರು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಹಲವಾರು ಕಾರ್ಯಕ್ರಮಗಳಿಗೂ ಅವರು ರೂವಾರಿಗಳಾಗಿದ್ದಾರೆ. ಅವರ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ. ಜನರ ಜೀವನ ಮಟ್ಟ ಸುಧಾರಿಸುವ ಮೂಲಕ ಕಲ್ಯಾಣ ಕರ್ನಾಟಕ ಹೆಸರಿಗೆ ಸಾರ್ಥಕತೆ ತುಂಬುವ ಛಲದಿಂದ ನಾನು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೇನೆ. ನಮ್ಮ ಈ ಸಂಕಲ್ಪಕ್ಕೆ ಎಲ್ಲರೂ ಕೈಜೋಡಿಸಬೇಕು' ಎಂದರು.
ಸರ್ದಾರ್ ವಲ್ಲಭಭಾಯಿ ಪಟೇಲರು ಭಾರತವನ್ನು ರಿಪಬ್ಲಿಕ್ ದೇಶವನ್ನಾಗಿ ಮಾಡಿದ ಪ್ರಥಮ ನಾಯಕರು. ಅವರು ನಮಗೆಲ್ಲ ಆದರ್ಶರು. ಅವರು ತೋರಿಸಿರುವ ತತ್ವ- ಆದರ್ಶಗಳ ಅಡಿಯಲ್ಲಿ ಸ್ವತಂತ್ರ ಭಾರತವನ್ನು ನಾವು ಮುನ್ನಡೆ ಮಾಡುತ್ತಿದ್ದೇವೆ' ಎಂದರು. 'ಪ್ರಧಾನಿ ನರೇಂದ್ರ ಮೋದಿ ಅವರಂತಹ ನಾಯಕತ್ವ ನಮ್ಮ ದೇಶಕ್ಕೆ ಸಿಕ್ಕಿದೆ. ಇಂದು ಅವರ ಜನ್ಮದಿನವೂ ಹೌದು. ನವ ಕರ್ನಾಟಕ ಮತ್ತು ನವ ಭಾರತ ನಿರ್ಮಾಣಕ್ಕೆ ಎಲ್ಲರೂ ಪ್ರಯತ್ನಿಸೋಣ' ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments