Webdunia - Bharat's app for daily news and videos

Install App

ಯಡಿಯೂರಪ್ಪ ಮುಗ್ಧರಂತೆ, ಕುತಂತ್ರ ಅವ್ರಿಗೆ ಗೊತ್ತಿಲ್ಲವಂತೆ!

Webdunia
ಭಾನುವಾರ, 10 ಫೆಬ್ರವರಿ 2019 (14:30 IST)
ಯಡಿಯೂರಪ್ಪ ಮುಗ್ಧ. ಕುತಂತ್ರ ಗೊತ್ತಿಲ್ಲದವರು. ಕುರ್ಚಿ ಉಳಿಸಿಕೊಳ್ಳಲು ಸಿಎಂ ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಶಾಸಕ ಆರೋಪ ಮಾಡಿದ್ದಾರೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸದಾ ಕಾಲ ಐಷಾರಾಮಿ ಜೀವನ ನಡೆಸುತ್ತಾರೆ. ಈಗ ನಕಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ. ಇದು ಜನರಲ್ಲಿ ಅಸಹ್ಯ ಭಾವನೆ ಹುಟ್ಟಿಸಿದೆ ಎಂದು ಶಾಸಕ ಶ್ರೀರಾಮುಲು  ವಾಗ್ದಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮುಗ್ಧ. ಕುತಂತ್ರ ಗೊತ್ತಿಲ್ಲದವರು. ಕುರ್ಚಿ ಉಳಿಸಿಕೊಳ್ಳಲು ಸಿಎಂ ಈ ರೀತಿ ಮಾಡಿದ್ದಾರೆ. ಆಡಿಯೋ ಬಿಡುಗಡೆ ಮಾಡುವಾಗ ನಾನೇ ಮಾಡಿಸಿದ್ದು ಅಂತಾರೆ. ಧರ್ಮಸ್ಥಳಕ್ಕೆ ಹೋದಾಗ ಅದು ಯಡಿಯೂರಪ್ಪ ಅವರದ್ದು ಅಂತಾ ನಾನು ಹೇಳಿಲ್ಲ ಅಂತಾರೆ.

ರಾಜ್ಯದ ಬಜೆಟ್ ಮಂಡಿಸುವಾಗ ಆಡಿಯೋ ಬಿಡುಗಡೆ ಮಾಡೋದು ಮುಖ್ಯನಾ? ಬಜೆಟ್‌ಗಿಂತ ಆಡಿಯೋ ಮುಖ್ಯ ಆಯ್ತಾ? ಡಬ್ಬಿಂಗ್, ಮಿಕ್ಸಿಂಗ್, ಮಿಮಿಕ್ರಿ ಮಾಡೋದ್ರಲ್ಲಿ ಸಿಎಂ ನಿಸ್ಸೀಮರು. ಅವರು ಸ್ವತಃ ಸಿನಿಮಾ ನಿರ್ಮಾಪಕರು. ಪದೇ ಪದೇ ಅವರು ಸ್ಪೀಕರ್ ಹೆಸರು ಹೇಳ್ತಿದ್ದಾರೆ. ಆಡಿಯೋದಲ್ಲಿ ಇದ್ದಿದ್ದು ಬರೀ ಮಿಮಿಕ್ರಿ. ದೇವೇಗೌಡರ ಕುಟುಂಬದ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? ಎಂದು ಶ್ರೀರಾಮುಲು, ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಸಿಎಂ ಕುಮಾರಸ್ವಾಮಿ ಜನರನ್ನು ದಿಕ್ಕು ತಪ್ಪಿಸ್ತಿದ್ದಾರೆ. ಪಂಚತಾರಾ ಹೋಟೆಲನ್ನೇ ಮನೆ ಮಾಡಿಕೊಂಡಿದ್ದಾರೆ. ಇದರ ಬಿಲ್ಲನ್ನು ಲೋಕೋಪಯೋಗಿ ಗುತ್ತಿಗೆದಾರರು ಕಟ್ಟುತ್ತಿದ್ದಾರೆ. ಇಂಥವರಿಂದ ಬಡವರು ಹಾಗೂ ಸಾಮಾನ್ಯರ ಅಭಿವೃದ್ಧಿ ಸಾಧ್ಯವಿಲ್ಲ. ನಾನು ಕ್ಲರ್ಕ್ ಅಂತಾ ಹೇಳ್ತಾರೆ. 35 ಸೀಟು ಗೆದ್ದು ಕ್ಲರ್ಕ್ ಆಗಿಯೇ ಇರಬೇಕು, ಡಿಸಿ ಆಗೋಕೆ ಆಗಲ್ಲ. ಮೊನ್ನೆ ಮಂಡಿಸಿದ ಬಜೆಟ್ ಕೇವಲ ಐದಾರು ಜಿಲ್ಲೆಗೆ ಮೀಸಲಾಗಿದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments