ಯಡಿಯೂರಪ್ಪ ಗಾಯಗೊಂಡ ಹೆಬ್ಬುಲಿಯಂತೆ: ತೇಜಸ್ವಿನಿ ರಮೇಶ್

Webdunia
ಸೋಮವಾರ, 17 ಏಪ್ರಿಲ್ 2017 (15:05 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗಾಯಗೊಂಡ ಹೆಬ್ಬುಲಿಯಂತೆ ಎಂದು ಮಾಜಿ ಸಂಸದೆ ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಹೇಳಿದ್ದಾರೆ.
 
ಗುಂಡ್ಲುಪೇಟೆಯಲ್ಲಿ ಆಯೋಜಿಸಲಾದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಭಯದಿಂದ ಸಿದ್ದರಾಮಯ್ಯನವರ ಸಂಪೂರ್ಣ ಸರಕಾರವೇ ಗುಂಡ್ಲುಪೇಟೆಗೆ ಶಿಫ್ಟ್ ಆಗಿತ್ತು, ಹಣ ಬಲ, ಅಧಿಕಾರ ಬಲದಿಂದ ಚುನಾವಣೆ ಗೆದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಸಿದ್ದರಾಮಯ್ಯನವರೇ ಯಡಿಯೂರಪ್ಪ ಕಂಡರೆ ಯಾಕೆ ಅಷ್ಟು ಭಯಪಡುತ್ತೀರಿ? ಯಡಿಯೂರಪ್ಪ ಹುಲಿ ಇದ್ದ ಹಾಗೆ ಎದೆಗುಂದುವ ನಾಯಕರಲ್ಲ ಎಂದು ವಾಗ್ದಾಳಿ ನಡೆಸಿದರು.
 
ಇಂಧನ ಸಚಿವ ಡಿ.ಕೆ.ಶಿವಕುಮಾರ್ ನನ್ನ ಬೆನ್ನಿಗೆ ಚೂರಿಹಾಕಿದವರು. ಗುಂಡ್ಲುಪೇಟೆಯ ಉಪಚುನಾವಣೆಯಲ್ಲಿ ಶಿವಕುಮಾರ್ ಗೆದ್ದಿರಬಹುದು. ಆದರೆ, ದೆಹಲಿಯ ಹೈಕಮಾಂಡ್ ಮುಂದೆ ಇವರ ಆಟ ನಡೆಯೋದಿಲ್ಲ ಎಂದು ಬಿಜೆಪಿ ನಾಯಕಿ ತೇಜಸ್ವಿನಿ ರಮೇಶ್ ಕಿಡಿಕಾರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments