Select Your Language

Notifications

webdunia
webdunia
webdunia
webdunia

ಭ್ರಷ್ಟಾಚಾರದ ರೂವಾರಿ ಬಿ.ಎಸ್.ಯಡಿಯೂರಪ್ಪ: ಕುಮಾರಸ್ವಾಮಿ

ಭ್ರಷ್ಟಾಚಾರದ ರೂವಾರಿ ಬಿ.ಎಸ್.ಯಡಿಯೂರಪ್ಪ: ಕುಮಾರಸ್ವಾಮಿ
ತಿಪಟೂರು , ಶನಿವಾರ, 27 ಮೇ 2017 (14:31 IST)
ಭ್ರಷ್ಟಾಚಾರದ ರೂವಾರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 
ಈ ಹಿಂದೆ ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಹಲವು ಬಿಜೆಪಿ ನಾಯಕರೇ ಯಡಿಯೂರಪ್ಪರನ್ನು ಟೀಕಿಸಿದ್ದಾರೆ. ಯಡಿಯೂರಪ್ಪ 
 
ಇದೀಗ ಬಿಎಸ್‌ವೈರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬಂದು ಏನಂತ ಮತಯಾಚಿಸುತ್ತಾರೆ ಎಂದು ಪ್ರಶ್ನಿಸಿದರು.
 
ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಬಿಜೆಪಿ ನಾಯಕರು ನನ್ನ ಮೇಲೆ ಗೂಬೆ ಕೂರಿಸಲು ಮುಂದಾಗಿದ್ದಾರೆ. ಇದರಿಂದ ಬಿಜೆಪಿಯವರು ಬೆಟ್ಟ ಅಗೆದು ಇಲಿ ಹುಡುಕಿದಂತಾಗುತ್ತದೆ ಎಂದು ಲೇವಡಿ ಮಾಡಿದರು.
 
ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಭ್ರಷ್ಟಾಚಾರದಿಂದ ಜನತೆ ರೋಸಿ ಹೋಗಿದ್ದಾರೆ. ಜನತೆ ಹೊಸ ಬದಲಾವಣೆ ಬಯಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ಫಲಿತಾಂಶ ರಾಷ್ಟ್ರೀಯ ಪಕ್ಷಗಳಿಗೆ ತಕ್ಕ ಪಾಠವಾಗಲಿದೆ ಎಂದರು. 
 
ಹಳೇ ಮೈಸೂರು, ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಅಲೆ ಎದ್ದಿದೆ. ಜೆಡಿಎಸ್ ಪಕ್ಷಕ್ಕೆ ಭವಿಷ್ಯ ಇದೆಯೋ ಇಲ್ಲವೋ ಎನ್ನುವುದನ್ನು ಎರಡು ರಾಷ್ಟ್ರೀಯ ಪಕ್ಷಗಳು ಕಾದು ನೋಡಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಲ್ಲಡ್ಕ ಉದ್ವಿಗ್ನ: ಜೂನ್ 2ರವರೆಗೆ ನಿಷೇಧಾಜ್ಞೆ ಜಾರಿ