Select Your Language

Notifications

webdunia
webdunia
webdunia
webdunia

ಎಸ್‌.ಎಂ.ಕೃಷ್ಣ ನಿವಾಸಕ್ಕೆ ಯಡಿಯೂರಪ್ಪ ಭೇಟಿ: ಬಿಜೆಪಿ ಪಕ್ಷಕ್ಕೆ ಆಹ್ವಾನ

ಎಸ್‌.ಎಂ.ಕೃಷ್ಣ ನಿವಾಸಕ್ಕೆ ಯಡಿಯೂರಪ್ಪ ಭೇಟಿ: ಬಿಜೆಪಿ ಪಕ್ಷಕ್ಕೆ ಆಹ್ವಾನ
ಬೆಂಗಳೂರಿನ , ಸೋಮವಾರ, 6 ಮಾರ್ಚ್ 2017 (18:11 IST)
ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ಯಡಿಯೂರಪ್ಪ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಆಹ್ವಾನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿಗೆ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಕೃಷ್ಣ ಅವರ ನಿವಾಸಕ್ಕೆ ಇಂದು ಸಂಜೆ 6 ಗಂಟೆಗೆ ಆರ್,.ಅಶೋಕ್ ಜೊತೆ ಯಡಿಯೂರಪ್ಪ ಆಗಮಿಸಿ ಚರ್ಚೆ ನಡೆಸಿದರು ಎನ್ನಲಾಗಿದೆ.
 
ತಮ್ಮ ನಿವಾಸಕ್ಕೆ ಆಗಮಿಸಿದ ಯಡಿಯೂರಪ್ಪರನ್ನು, ಎಸ್.ಎಂ.ಕೃಷ್ಣ ಹೂಗುಚ್ಚ ನೀಡಿ ಸ್ವಾಗತಿಸಿದರು. ಮುಂದಿನ ರಾಜಕೀಯ ನಿಲುವುಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕೃಷ್ಣ ಅವರ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ ಎನ್ನಲಾಗಿದೆ.   
 
ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಂಡಕಾರಿ ಪಕ್ಷಕ್ಕೆ ಗುಡ್‌ಬೈ ಹೇಳಿದ್ದರು. ಇದೀಗ ಯಾವ ಪಕ್ಷ ಸೇರುತ್ತಾರೆ ಎನ್ನುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ನಿರ್ಧಾರದಿಂದ ನಮಗೆ ನೋವಾಗಿದೆ: ಈಶ್ವರಪ್ಪ ಬಣ