Webdunia - Bharat's app for daily news and videos

Install App

ವಿದೇಶ ಪ್ರವಾಸದಿಂದ ಹಿಂದಿರುಗಿದ ಯಡಿಯೂರಪ್ಪ; 25 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

Webdunia
ಮಂಗಳವಾರ, 24 ಆಗಸ್ಟ್ 2021 (10:00 IST)
ಬೆಂಗಳೂರು (ಆಗಸ್ಟ್ 24); ರಾಜ್ಯ ರಾಜಕಾರಣದಲ್ಲಿ ಯಾವಾಗಲೂ ಸಕ್ರೀವಾಗಿರುತ್ತಿದ್ದ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕಳೆದ ವಾರ ವಿಶ್ರಾಂತಿಗೆ ಮೊರೆ ಹೋಗಿದ್ದರು.

ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ, ಕುಟುಂಬದೊಂದಿಗೆ ಸಮಯ ಕಳೆಯುವ ಸಲುವಾಗಿ ತಮ್ಮ ಕುಟುಂಬದ ಸಮೇತ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದರು. ಇದೀಗ ಅವರು ರಾಜ್ಯ ಮರಳಿದ್ದು, "ಮುಂದಿನ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದ್ದೇನೆ" ಎಂದು ತಿಳಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿರುವ ಬಿ.ಎಸ್. ಯಡಿಯೂರಪ್ಪ, "ಇನ್ನೂ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಜಿಲ್ಲಾವಾರು ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ. ಒಂದು ಜಿಲ್ಲೆಗೆ ಒಂದು ದಿನ ಹೋಗುತ್ತೇನೆ. ಬಹಳ ವರ್ಷಗಳ ಬಳಿಕ ನಾನು ವಿದೇಶ ಪ್ರವಾಸ ಹೋಗಿದ್ದೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಹೋಗಿದ್ದೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ಎಲ್ಲರು ನೋಡುವಂತದ್ದು, ನಾನು ಸಹ ಐದು ದಿನ ಎಲ್ಲಾ ರಾಜಕೀಯ ಮರೆತು ಖುಷಿಯಾಗಿದ್ದೆ" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments