Webdunia - Bharat's app for daily news and videos

Install App

ವಿದೇಶ ಪ್ರವಾಸದಿಂದ ಹಿಂದಿರುಗಿದ ಯಡಿಯೂರಪ್ಪ; 25 ದಿನಗಳ ನಂತರ ರಾಜ್ಯಾದ್ಯಂತ ಪ್ರವಾಸ

Webdunia
ಮಂಗಳವಾರ, 24 ಆಗಸ್ಟ್ 2021 (10:00 IST)
ಬೆಂಗಳೂರು (ಆಗಸ್ಟ್ 24); ರಾಜ್ಯ ರಾಜಕಾರಣದಲ್ಲಿ ಯಾವಾಗಲೂ ಸಕ್ರೀವಾಗಿರುತ್ತಿದ್ದ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಕಳೆದ ವಾರ ವಿಶ್ರಾಂತಿಗೆ ಮೊರೆ ಹೋಗಿದ್ದರು.

ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ತೆಗೆದುಕೊಂಡ ಬಳಿಕ ಬಿ.ಎಸ್. ಯಡಿಯೂರಪ್ಪ, ಕುಟುಂಬದೊಂದಿಗೆ ಸಮಯ ಕಳೆಯುವ ಸಲುವಾಗಿ ತಮ್ಮ ಕುಟುಂಬದ ಸಮೇತ ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳಿದ್ದರು. ಇದೀಗ ಅವರು ರಾಜ್ಯ ಮರಳಿದ್ದು, "ಮುಂದಿನ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದ್ದೇನೆ" ಎಂದು ತಿಳಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿರುವ ಬಿ.ಎಸ್. ಯಡಿಯೂರಪ್ಪ, "ಇನ್ನೂ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಜಿಲ್ಲಾವಾರು ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ. ಒಂದು ಜಿಲ್ಲೆಗೆ ಒಂದು ದಿನ ಹೋಗುತ್ತೇನೆ. ಬಹಳ ವರ್ಷಗಳ ಬಳಿಕ ನಾನು ವಿದೇಶ ಪ್ರವಾಸ ಹೋಗಿದ್ದೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಹೋಗಿದ್ದೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ಎಲ್ಲರು ನೋಡುವಂತದ್ದು, ನಾನು ಸಹ ಐದು ದಿನ ಎಲ್ಲಾ ರಾಜಕೀಯ ಮರೆತು ಖುಷಿಯಾಗಿದ್ದೆ" ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments