ಯಡಿಯೂರಪ್ಪಗೆ ಅಯೋಗ್ಯ ಪದಗಳು ಮಾತ್ರ ಗೊತ್ತಿವೆ: ಸಿಎಂ ಲೇವಡಿ

Webdunia
ಮಂಗಳವಾರ, 19 ಡಿಸೆಂಬರ್ 2017 (13:41 IST)
ಬಿಎಸ್ ಯಡಿಯೂರಪ್ಪ ಅವರಿಗೆ ನಾಲಾಯಕ್, ಅಯೋಗ್ಯ ಪದಗಳು ಬಿಟ್ಟರೆ ಬೇರೆ ಗೊತ್ತಿಲ್ಲ. ಹೀಗಾಗಿಯೇ ಹೋದಲ್ಲೆಲ್ಲ ಅವರು ಅದೇ ಪದಗಳನ್ನು ಬಳಸುತ್ತಿದ್ದಾರೆ. ಬೊಗಳೆ ದಾಸಯ್ಯ ಎಂಬಂತಹ  ಮಾತುಗಳನ್ನಾಡಿದ್ದಾರೆ. ನಾವು ಬೊಗಳೆ ದಾಸರಲ್ಲ.ಯಾರು ಬೊಗಳೆ ದಾಸರು ಎಂಬುದನ್ನು ತಿಳಿದುಕೊಳ್ಳಲು ಬಹಿರಂಗ ಚರ್ಚೆಗೆ ಬರಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. 
ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಿದ್ದು ಅವರಿಗೆ ಎಲ್ಲರೂ ಸಹಕಾರ ನೀಡಲಿದ್ದಾರೆ. ಸೋನಿಯಾ ಗಾಂಧಿ ಅವರು ಸಕ್ರಿಯ ರಾಜಕಾರಣ ಮುಂದುವರೆಸುತ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ರು. ಕಲಬುರಗಿಯಲ್ಲಿ ಮಾತನಾಡಿದ ಮಾತನಾಡಿದ ಅವರು, 
 
ಪ್ರಿಯಾಂಕ ಗಾಂಧಿ ರಾಜಕೀಯಕ್ಕೆ ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ರಾಹುಲ್ ಗಾಂಧಿಯವರು ಯುವಕರಿಗೆ ಆದ್ಯತೆ ಸಿಗಲಿ ಎಂದಿದ್ದಾರೆ. ಹಿರಿಯರು ನಿವೃತ್ತಿಯಾಗಲಿ ಎಂದರ್ಥವಲ್ಲ. ಹಿರಿಯರ ಮಾರ್ಗದರ್ಶನದೊಂದಿಗೆ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದರು.
 
ಯೋಗೇಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ‌ ಮಲ್ಲಮ್ಮಗೆ ಬಿಜೆಪಿಯವರು ಕಿರುಕುಳ‌ ನೀಡಿದ್ದರು. 
ಹಾಗಾಗಿ ಅವರು ಈ ಹಿಂದೆ ಸುಳ್ಳು ಹೇಳಿಕೆ ನೀಡಿದ್ದರು.  ಈಗ ಮಲ್ಲಮ್ಮ ಅವರಿಗೆ  ಅರಿವಾಗಿದೆ. ಹೀಗಾಗಿ‌ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ ಎಂದರು. 
 
ನಾವು ಬಹಿರಂಗ ಚರ್ಚೆಗೆ ಸಿದ್ಧ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಸಿದ್ದರಾಮಯ್ಯ ಅಯೋಗ್ಯ ಎಂಬ ಯಡಿಯೂರಪ್ಪ ಮಾತಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸಿಎಂ ಅಯೋಗ್ಯರು ಯಾರೆಂಬುದನ್ನು ಜನತೆ ಗುರುತಿಸುತ್ತಾರೆ ಅಂತ ಸಿಎಂ ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments