Select Your Language

Notifications

webdunia
webdunia
webdunia
webdunia

ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯಡಿಯೂರಪ್ಪ ನಿರ್ಧಾರ

ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯಡಿಯೂರಪ್ಪ ನಿರ್ಧಾರ
ಬೆಂಗಳೂರು , ಶುಕ್ರವಾರ, 9 ಫೆಬ್ರವರಿ 2018 (16:20 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಮತದಾರರನ್ನು ಸೆಳೆಯುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಫೆಬ್ರುವರಿ 10ರಂದು ಕೊಳಗೇರಿ ಪ್ರದೇಶಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ.
 
ಪಕ್ಷದ ಗೆಲುವಿಗೆ ನಿರ್ಣಾಯಕ ಪಾತ್ರ ವಹಿಸಲಿರುವ ಕೊಳೆಗೇರಿ ನಿವಾಸಿಗಳ ಮನಗೆಲ್ಲಲು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕೊಳಗೇರಿ ಪ್ರದೇಶದಲ್ಲಿ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ ಮಾರನೇ ದಿನ ಕೊಳಗೇರಿ ನಿವಾಸಿಗಳ ಸ್ಥಿತಿಗತಿ ಕುರಿತು ವರದಿ ಬಿಡುಗಡೆ ಮಾಡಲಿದ್ದಾರೆ.
 
ಕೇಂದ್ರದ ಯೋಜನೆಗಳ ಬಗ್ಗೆ ಕೊಳೆಗೇರಿ ಪ್ರದೇಶಗಳ ಜನರಲ್ಲಿ ಅರಿವು ಮೂಡಿಸಲು ಮುಂದಾಗಿದ್ದಾರೆ. ಗಾಂಧಿನಗರ ಸೇರಿದಂತೆ ಹಲವು ವಿಧಾನಸಭಾ ಕ್ಷೇತ್ರಗಳ ಕೊಳೆಗೇರಿ ಪ್ರದೇಶಗಳಲ್ಲಿ ಕಾಂಗ್ರೆಸ್ ವಿರುದ್ದ ಸಮಾವೇಶ ನಡೆಸಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರಲು ಯೋಜನೆ ಹಾಕಿಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

‘ಸದ್ಯಕ್ಕೆ ಮೋದಿಗೆ ಸರಿಸಮ ಸಿದ್ದರಾಮಯ್ಯ, ಮುಂದೆ ಅವರೇ ಪ್ರಧಾನಿ ಆಗಲಿ’