Webdunia - Bharat's app for daily news and videos

Install App

ಯಡಿಯೂರಪ್ಪ ಮನೆ ಮುಂದೆಯೇ ನಡೆಯಿತು ಮಾರಾಮಾರಿ?

Webdunia
ಶನಿವಾರ, 23 ಮಾರ್ಚ್ 2019 (19:52 IST)
ಲೋಕಸಭೆ ಟಿಕೆಟ್  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮನೆ ಮುಂದೆಯೇ ಬಿಜೆಪಿ ಮುಖಂಡರ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ.
ಸಿ.ಪಿ‌. ಯೋಗೇಶ್ವರ್ ಮತ್ತು ನಿಶಾ ಯೋಗೇಶ್ವರ್ ಗೆ ಟಿಕೆಟ್ ಬೇಡ, ರಾಮನಗರ ಜಿಲ್ಲಾಧ್ಯಕ್ಷ ರುದ್ರೇಶ್ ಗೆ ಟಿಕೆಟ್  ಕೊಡಿ ಅಥವಾ ಕಾರ್ಯಕರ್ತರಿಗೆ ಕೊಡಿ ಎಂದು ಕೆಲವು  ಬಿಜೆಪಿ ಕಾರ್ಯಕರ್ತರಿಂದ ಯಡಿಯೂರಪ್ಪಗೆ ಮನವಿ ಸಲ್ಲಿಸಲಾಯಿತು.
ಯಡಿಯೂರಪ್ಪ ಮನೆಯಿಂದ ಹೊರಬಂದ ವೇಳೆ ಮನವಿ ಮಾಡಿದ ಕಾರ್ಯಕರ್ತರಿಗೆ, ಬಿಎಸ್ವೈ, ನಾನೇನು ಮಾಡಲಪ್ಪ, ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿ ಮನೆಯಿಂದ ನಿರ್ಗಮಿಸಿದ್ರು.

ಕಾರ್ಯಕರ್ತರಿಗೆ ಕೊಡಿ, ಕ್ಷೇತ್ರದಲ್ಲಿ ಕಾರ್ಯಕರ್ತರು ಕಷ್ಟಪಡ್ತಿದ್ದಾರೆ ಎಂದ ಕಾರ್ಯಕರ್ತರು ಒತ್ತಾಯ ಮಾಡಿದ್ರು. ಅದರ ನಡುವೆಯೇ ಏನು ಹೇಳಬೇಕೋ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿ ಮನೆಯಿಂದ ತೆರಳಿದ್ರು ಯಡಿಯೂರಪ್ಪ. ಆಗ ಯಡಿಯೂರಪ್ಪ ತೆರಳಿದ ಬಳಿಕ ಧವಳಗಿರಿ ನಿವಾಸದ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರಲ್ಲೇ ಕಿತ್ತಾಟ ಆರಂಭಗೊಂಡಿತು. ಕೆಲವರು ಕೈ ಕೈಮಿಲಾಯಿಸಿದ ಘಟನೆಯೂ ನಡೆಯಿತು.

ಯೋಗೇಶ್ವರ್ ಬೆಂಬಲಿಗರು ಮತ್ತು ರುದ್ರೇಶ್ ಬೆಂಬಲಿಗರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments