Webdunia - Bharat's app for daily news and videos

Install App

ಯಡಿಯೂರಪ್ಪ ಮನೆ ಮುಂದೆಯೇ ನಡೆಯಿತು ಮಾರಾಮಾರಿ?

Webdunia
ಶನಿವಾರ, 23 ಮಾರ್ಚ್ 2019 (19:52 IST)
ಲೋಕಸಭೆ ಟಿಕೆಟ್  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಮನೆ ಮುಂದೆಯೇ ಬಿಜೆಪಿ ಮುಖಂಡರ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ.
ಸಿ.ಪಿ‌. ಯೋಗೇಶ್ವರ್ ಮತ್ತು ನಿಶಾ ಯೋಗೇಶ್ವರ್ ಗೆ ಟಿಕೆಟ್ ಬೇಡ, ರಾಮನಗರ ಜಿಲ್ಲಾಧ್ಯಕ್ಷ ರುದ್ರೇಶ್ ಗೆ ಟಿಕೆಟ್  ಕೊಡಿ ಅಥವಾ ಕಾರ್ಯಕರ್ತರಿಗೆ ಕೊಡಿ ಎಂದು ಕೆಲವು  ಬಿಜೆಪಿ ಕಾರ್ಯಕರ್ತರಿಂದ ಯಡಿಯೂರಪ್ಪಗೆ ಮನವಿ ಸಲ್ಲಿಸಲಾಯಿತು.
ಯಡಿಯೂರಪ್ಪ ಮನೆಯಿಂದ ಹೊರಬಂದ ವೇಳೆ ಮನವಿ ಮಾಡಿದ ಕಾರ್ಯಕರ್ತರಿಗೆ, ಬಿಎಸ್ವೈ, ನಾನೇನು ಮಾಡಲಪ್ಪ, ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಹೇಳಿ ಮನೆಯಿಂದ ನಿರ್ಗಮಿಸಿದ್ರು.

ಕಾರ್ಯಕರ್ತರಿಗೆ ಕೊಡಿ, ಕ್ಷೇತ್ರದಲ್ಲಿ ಕಾರ್ಯಕರ್ತರು ಕಷ್ಟಪಡ್ತಿದ್ದಾರೆ ಎಂದ ಕಾರ್ಯಕರ್ತರು ಒತ್ತಾಯ ಮಾಡಿದ್ರು. ಅದರ ನಡುವೆಯೇ ಏನು ಹೇಳಬೇಕೋ ನನಗೆ ಗೊತ್ತಾಗುತ್ತಿಲ್ಲ ಎಂದು ಹೇಳಿ ಮನೆಯಿಂದ ತೆರಳಿದ್ರು ಯಡಿಯೂರಪ್ಪ. ಆಗ ಯಡಿಯೂರಪ್ಪ ತೆರಳಿದ ಬಳಿಕ ಧವಳಗಿರಿ ನಿವಾಸದ ಮುಂದೆ ಅಸಮಾಧಾನ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರಲ್ಲೇ ಕಿತ್ತಾಟ ಆರಂಭಗೊಂಡಿತು. ಕೆಲವರು ಕೈ ಕೈಮಿಲಾಯಿಸಿದ ಘಟನೆಯೂ ನಡೆಯಿತು.

ಯೋಗೇಶ್ವರ್ ಬೆಂಬಲಿಗರು ಮತ್ತು ರುದ್ರೇಶ್ ಬೆಂಬಲಿಗರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಮುಂದಿನ ಸುದ್ದಿ
Show comments