Webdunia - Bharat's app for daily news and videos

Install App

ಬೈ ಎಲೆಕ್ಷನ್ ಗೆದ್ರೆ ಸರಕಾರ ನಮ್ಮದೇ ಎಂದ ಯಡಿಯೂರಪ್ಪ

Webdunia
ಭಾನುವಾರ, 12 ಮೇ 2019 (14:36 IST)
ಕುಂದಗೋಳ ಹಾಗೂ ಚಿಂಚೋಳಿ ಬೈ ಎಲೆಕ್ಷನ್ ಗೆದ್ರೆ ನಾವೇ ಸರ್ಕಾರ ರಚನೆ ಮಾಡುತ್ತೇವೆ. ಹೀಗಂತ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದು, 25 ಸಾವಿರ ಅಂತರದಿಂದ ಎಸ್. ಐ. ಚಿಕ್ಕನಗೌಡ್ರು ಕುಂದಗೋಳದಲ್ಲಿ ಗೆಲ್ತಾರೆ. ಸುಲಭವಾಗಿ ಹೆಚ್ಚಿನ ಅಂತರದಿಂದ ಗೆಲ್ತಾರೆ ಎನ್ನುವ ವಿಶ್ವಾಸವಿದೆ ಎಂದ್ರು.
ಇಂದು ಕುಂದಗೋಳ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿ,‌ ಚಿಂಚೋಳಿ ಕ್ಷೇತ್ರಕ್ಕೆ ಹೋಗಿ 16-17 ರಂದು ಮತ್ತೇ ಬರುತ್ತೇನೆ ಎಂದರು.

ಡಿ. ಕೆ. ಶಿವಕುಮಾರ್ ಅವರು ಎಷ್ಟೇ ಆಮಿಷ ಒಡ್ಡಿದ್ರು ನಮ್ಮ ಪಕ್ಷದವರು ಯಾರು ಹೋಗಲ್ಲಾ. ಡಿ. ಕೆ. ಶಿವಕುಮಾರ್ ಸೇರಿದಂತೆ ಎಷ್ಟೇ ಹಿರಿಯ ನಾಯಕರ ಪ್ರಯತ್ನ ಮಾಡಿದ್ರು ಬಿಜೆಪಿ ಬಿಟ್ಟು ಯಾರು ಹೋಗಲ್ಲ. ಕುಂದಗೋಳ ಹಾಗೂ ಚಿಂಚೋಳಿ ಎರಡು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ.

ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸುವ ಪ್ರಶ್ನೆಯೇ ಇಲ್ಲಾ. ಅವರೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಅವರು ಹೊಡೆದಾಡಿಕೊಂಡರೆ ಅದಕ್ಕೆ ನಾವು ಹೊಣೆಯಲ್ಲ ಎಂದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments