ಬೆದರಿಕೆ, ಹಗುರ ಮಾತಿಗೆ ಜನ ಉತ್ತರ ಕೊಡ್ತಾರೆ ಎಂದ ಯಡಿಯೂರಪ್ಪ

Webdunia
ಶನಿವಾರ, 9 ಮಾರ್ಚ್ 2019 (16:20 IST)
ರಾಜ್ಯದಲ್ಲಿ ಲೋಕಸಭಾ ಟಿಕೆಟ್ ಹಂಚಿಕೆ ವಿಚಾರ ಕುರಿತು ನಾನು ಅಮಿತ್ ಶಾ ಭೇಟಿಯಾಗಿ ಚರ್ಚೆ ಮಾಡಿದ್ದೇನೆ. ಮತ್ತೆ ನಮ್ಮ ರಾಜ್ಯದ ಮುಖಂಡರ ಜೊತೆ ಚರ್ಚಿಸಿ ದೆಹಲಿಗೆ ಹೋಗಿ ಫೈನಲ್ ಮಾಡ್ತೇವೆ ಅಂತ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸುಮಲತಾಗೆ ಸೀಟ್ ಸಿಗೋದು ಬಿಡೋದು ಜೆಡಿಎಸ್-ಕಾಂಗ್ರೆಸ್ ಗೆ ಬಿಟ್ಟದ್ದು. ಆದ್ರೆ ಸುಮಲಾತ ಬಗ್ಗೆ ಹಗುರವಾದ ಮಾತು ಮೆಚ್ಚುವಂಥ ಮಾತಲ್ಲ. ಬೆದರಿಕೆ ಹಾಕೋದು ಮತ್ತು ಹಗುರವಾಗಿ ಮಾತನಾಡೋದಕ್ಕೆ ಮಂಡ್ಯದ ‌ಜನ ಉತ್ತರ ಕೊಡ್ತಾರೆ ಎಂದ್ರು. ಸುಮಲತಾ ಅವರನ್ನು ಬಿಜೆಪಿಗೆ ಸೆಳೆಯುವ ಯಾವುದೇ ಪ್ರಯತ್ನ ಮಾಡಿಲ್ಲಾ. ಅವರು ಪಕ್ಷೇತರರಾಗಿ ನಿಂತ್ರೆ ಬೆಂಬಲಿಸುವ ಬಗ್ಗೆಯೂ ನಿರ್ಧಾರವಾಗಿಲ್ಲ. ಮೋದಿ ಅವರ ಬಗ್ಗೆ ಮಾತನಾಡೋ ನೈತಿಕತೆ ಅಪ್ಪ ಮಕ್ಕಳಿಗೆ ಇಲ್ಲ ಎಂದರು.

ಇದರಿಂದ ಅವರು ಜನರ ಮುಂದೆ ನಗೆಪಾಟಲಿಗೆ ಈಡಾಗ್ತಾರೆ. ನಾಳೆ ನಾಡಿದ್ದು ಲೋಕಸಬಾ ಚುನಾವಣೆ ಘೋಷಣೆಯಾಗುತ್ತೆ. 22 ಲೋಕಸಭಾ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಎಲ್ಲಾ ಕಡೆ ಪ್ರವಾಸದಲ್ಲಿದ್ದೇನೆ. ಮೋದಿ ಪರ ನಿರೀಕ್ಷೆ ಮೀರಿ ಅಲೆ ಬೀಸುತ್ತಿದೆ. ಕರ್ನಾಟಕ ಸರ್ಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಇದೆ. ಅಭಿವೃದ್ಧಿ ಸ್ಥಗಿತವಾಗಿ ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರದಲ್ಲಿ ನಿರತವಾಗಿದೆ ಸರಕಾರ ಎಂದು ದೂರಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments