Webdunia - Bharat's app for daily news and videos

Install App

ಬೆದರಿಕೆ, ಹಗುರ ಮಾತಿಗೆ ಜನ ಉತ್ತರ ಕೊಡ್ತಾರೆ ಎಂದ ಯಡಿಯೂರಪ್ಪ

Webdunia
ಶನಿವಾರ, 9 ಮಾರ್ಚ್ 2019 (16:20 IST)
ರಾಜ್ಯದಲ್ಲಿ ಲೋಕಸಭಾ ಟಿಕೆಟ್ ಹಂಚಿಕೆ ವಿಚಾರ ಕುರಿತು ನಾನು ಅಮಿತ್ ಶಾ ಭೇಟಿಯಾಗಿ ಚರ್ಚೆ ಮಾಡಿದ್ದೇನೆ. ಮತ್ತೆ ನಮ್ಮ ರಾಜ್ಯದ ಮುಖಂಡರ ಜೊತೆ ಚರ್ಚಿಸಿ ದೆಹಲಿಗೆ ಹೋಗಿ ಫೈನಲ್ ಮಾಡ್ತೇವೆ ಅಂತ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಸುಮಲತಾಗೆ ಸೀಟ್ ಸಿಗೋದು ಬಿಡೋದು ಜೆಡಿಎಸ್-ಕಾಂಗ್ರೆಸ್ ಗೆ ಬಿಟ್ಟದ್ದು. ಆದ್ರೆ ಸುಮಲಾತ ಬಗ್ಗೆ ಹಗುರವಾದ ಮಾತು ಮೆಚ್ಚುವಂಥ ಮಾತಲ್ಲ. ಬೆದರಿಕೆ ಹಾಕೋದು ಮತ್ತು ಹಗುರವಾಗಿ ಮಾತನಾಡೋದಕ್ಕೆ ಮಂಡ್ಯದ ‌ಜನ ಉತ್ತರ ಕೊಡ್ತಾರೆ ಎಂದ್ರು. ಸುಮಲತಾ ಅವರನ್ನು ಬಿಜೆಪಿಗೆ ಸೆಳೆಯುವ ಯಾವುದೇ ಪ್ರಯತ್ನ ಮಾಡಿಲ್ಲಾ. ಅವರು ಪಕ್ಷೇತರರಾಗಿ ನಿಂತ್ರೆ ಬೆಂಬಲಿಸುವ ಬಗ್ಗೆಯೂ ನಿರ್ಧಾರವಾಗಿಲ್ಲ. ಮೋದಿ ಅವರ ಬಗ್ಗೆ ಮಾತನಾಡೋ ನೈತಿಕತೆ ಅಪ್ಪ ಮಕ್ಕಳಿಗೆ ಇಲ್ಲ ಎಂದರು.

ಇದರಿಂದ ಅವರು ಜನರ ಮುಂದೆ ನಗೆಪಾಟಲಿಗೆ ಈಡಾಗ್ತಾರೆ. ನಾಳೆ ನಾಡಿದ್ದು ಲೋಕಸಬಾ ಚುನಾವಣೆ ಘೋಷಣೆಯಾಗುತ್ತೆ. 22 ಲೋಕಸಭಾ ಕ್ಷೇತ್ರ ಗೆಲ್ಲುವ ಉದ್ದೇಶದಿಂದ ಎಲ್ಲಾ ಕಡೆ ಪ್ರವಾಸದಲ್ಲಿದ್ದೇನೆ. ಮೋದಿ ಪರ ನಿರೀಕ್ಷೆ ಮೀರಿ ಅಲೆ ಬೀಸುತ್ತಿದೆ. ಕರ್ನಾಟಕ ಸರ್ಕಾರ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಇದೆ. ಅಭಿವೃದ್ಧಿ ಸ್ಥಗಿತವಾಗಿ ವರ್ಗಾವಣೆ ದಂಧೆ ಮತ್ತು ಭ್ರಷ್ಟಾಚಾರದಲ್ಲಿ ನಿರತವಾಗಿದೆ ಸರಕಾರ ಎಂದು ದೂರಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments