ಸಿಎಂ ಮನೆಗೆ ಮುತ್ತಿಗೆ ಹಾಕೋದಿಲ್ಲ ಅಂತ ಯಡಿಯೂರಪ್ಪ ಹೇಳಿದ್ಯಾಕೆ?

Webdunia
ಶುಕ್ರವಾರ, 14 ಜೂನ್ 2019 (13:57 IST)
ಜಿಂದಾಲ್ ಗೆ ಭೂಮಿ ನೀಡಿರುವ ಮೈತ್ರಿ ಸರಕಾರದ ಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ ಹಾದಿ ತುಳಿದಿದೆ. ಆದರೆ ಸಿಎಂ ಮನೆಗೆ ಮುತ್ತಿಗೆ ಹಾಕೋದಿಲ್ಲ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ತುಘಲಕ್ ದರ್ಬಾರ್, ಲೂಟಿಯ ಬಗ್ಗೆ ನಮ್ಮ ಬಿಜೆಪಿ ಸಂಸದರು ಲೋಕಸಭೆಯಲ್ಲೂ ಪ್ರಸ್ತಾಪಿಸಬೇಕು. ಜಿಲ್ಲಾ, ತಾಲೂಕು ಮಟ್ಟದಲ್ಲೂ ನಾವು ಹೋರಾಟ ರೂಪಿಸುತ್ತೇವೆ. ನಮ್ಮ ಸಂಸದರು ದೆಹಲಿಗೆ ಹೋಗಬೇಕಾಗಿರುವ ಕಾರಣ ಭಾನುವಾರದ ಸಿಎಂ ಮನೆ ಮುತ್ತಿಗೆ ಕಾರ್ಯಕ್ರಮ ಕೈಬಿಟ್ಟಿದ್ದೇವೆ ಅಂತ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಈ ಸರ್ಕಾರ ಮನೆಗೆ ಹೋಗುವವರೆಗೆ ನಾವು ಸುಮ್ಮನಿರಲ್ಲ. ಜಿಂದಾಲ್ ಭೂಮಿ ‌ಮಾರಾಟ ವ್ಯವಹಾರದಲ್ಲಿ ಸರ್ಕಾರದ ಪ್ರಮುಖರಿಗೆ ಸಾಕಷ್ಟು ಕಿಕ್ ಬ್ಯಾಕ್ ಬಂದಿರೋ ಅನುಮಾನವಿದೆ. ವರ್ಗಾವಣೆ ದಂಧೆ ನಡೆಯುತ್ತಿದೆ ಎಂದರು.

ಒಂದು ವರ್ಷದಿಂದ ಬಡಕೊಂಡೆ. ಫೈವ್ ಸ್ಟಾರ್ ಹೊಟೇಲ್ ವಾಸ್ತವ್ಯ ಮಾಡಿದ್ರೆ ಆಗಲ್ಲ. ಜನ‌ಸಾಮಾನ್ಯರು ಸಿಎಂ ಭೇಟಿ ಮಾಡಲು ಆಗಲ್ಲ. ಯಾರೋ ಕಮಿಷನ್ ಕೊಡುವವರು ಭೇಟಿಯಾಗಬಹುದು. ಈಗ ಸರ್ಕಾರದ ಬುಡ ಅಲುಗುತ್ತಿದೆ ಎಂದು ಗೊತ್ತಾದ ಮೇಲೆ ಸರ್ಕಾರಿ ಬಂಗಲೆಗೆ ವಾಸ್ತವ್ಯ ಬದಲಾಯಿಸುತ್ತೇನೆ ಎಂದು ಸಿಎಂ ಎನ್ನುತ್ತಿದ್ದಾರೆ ಎಂದು ಯಡಿಯೂರಪ್ಪ ಟಾಂಗ್ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೀಪುರ, ನಾಗರಹೊಳೆ ಸಫಾರಿ ಸ್ಥಗಿತದಿಂದ ಬೇಜರಾಗಿದ್ದ ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31ಕೈದಿಗಳಿಗೆ ಬಿಡುಗಡೆ ಭಾಗ್ಯ

ಎಲ್‌ಪಿಜಿ ಸಿಲಿಂಡರ್‌ ಕೊರತೆ ಸಂಬಂಧ ರಾಜ್ಯದ ಸಂಸದರು ನ್ಯಾಯ ಸಿಗಲಿ: ಡಿಕೆ ಶಿವಕುಮಾರ್‌

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಿಗ್ ರಿಲೀಫ್‌

ರಾಹುಲ್‌ ದ್ರಾವಿಡ್‌ಗೆ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂದಿನ ಸುದ್ದಿ
Show comments