Webdunia - Bharat's app for daily news and videos

Install App

ನನ್ನ ಜನ್ಮದಿನದಂದು ಸಿಹಿ ಹಂಚಬೇಡಿ ಎಂದ ಯಡಿಯೂರಪ್ಪ!

Webdunia
ಭಾನುವಾರ, 24 ಫೆಬ್ರವರಿ 2019 (16:18 IST)
ಫೆ. 27 ರಂದು ನನ್ನ ಹುಟ್ಟುಹಬ್ಬವಿದೆ. ಆದರೆ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಯಾರೂ ಸಿಹಿ ಹಂಚಬಾರದು ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರು ಸಿದ್ದಗಂಗಾ ಶ್ರೀಗಳು ನಮ್ಮನ್ನು ಅಗಲಿದ್ದು ಹಾಗೂ 40 ಯೋಧರು ಹುತಾತ್ಮರಾಗಿರುವ ಹಿನ್ನೆಲೆಯಲ್ಲಿ ನಾನು ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಳ್ಳುತ್ತಿದ್ದೇನೆ. ಚಿತ್ರದುರ್ಗದಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದೇನೆ. ನನ್ನ ಹುಟ್ಟುಹಬ್ಬದ ದಿನದಂದು ಯಾರೂ ಸಿಹಿ ಹಂಚಬಾರದು ಎಂದು ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏರ್ ಶೋ ಅಂತಾರಾಷ್ಟ್ರೀಯ ಕಾರ್ಯಕ್ರಮ, ಇಲ್ಲಿ ಯಾವುದೇ ಅವಘಡ ನಡೆಯದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಹೊಣೆ. ಆದರೆ ಕಾರುಗಳು ಸುಟ್ಟುಹೋಗಿರುವುದಕ್ಕೆ ಇದಕ್ಕಿಂತಲೂ ಹೆಚ್ಚಿನ ಅನಾಹುತ ನಡೆದಿದ್ದರೆ, ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಹೊರಬೇಕಿತ್ತು. ಕಾರುಗಳು ಸುಟ್ಟುಹೋಗಿ ಒಂದು ಗಂಟೆಗಳ ನಂತರ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದೆ ಎಂದು ದೂರಿದರು. ಕೇವಲ ಕಾರುಗಳು ಸುಟ್ಟುಹೋಗಿವೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸಮಾಧಾನದ ಮಾತನಾಡಿರುವ ಗೃಹ ಸಚಿವ ಎಂ.ಬಿ. ಪಾಟೀಲ್ ಅವರಿಗೆ ನೂರಾರು ಕಾರುಗಳು ಭಸ್ಮವಾಗಿದ್ದು, ರಾಷ್ಟ್ರೀಯ ನಷ್ಟ ಎಂದು ಅನ್ನಿಸಲಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿ ಪ್ರಕರಣವನ್ನು ರಾಜಕಾರಣದ ದೃಷ್ಟಿಯಿಂದ ನೋಡುತ್ತಿಲ್ಲ. ಘಟನೆಗೂ ಮುನ್ನ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಇದು ರಾಜ್ಯದ ಜವಾಬ್ದಾರಿ ಕೂಡ. ಅದು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಬಾರದು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments