Webdunia - Bharat's app for daily news and videos

Install App

ಯಡಿಯೂರಪ್ಪ ಸಂಶಯಾಸ್ಪದ ಹೇಳಿಕೆ ಬಗ್ಗೆ ಪ್ರಧಾನಿ ಮೋದಿಯವರು ಸ್ಪಷ್ಟೀಕರಣ ನೀಡಬೇಕು-ಸಿದ್ಧರಾಮಯ್ಯ ಟ್ವೀಟ್

Webdunia
ಗುರುವಾರ, 28 ಫೆಬ್ರವರಿ 2019 (13:57 IST)
ಬೆಂಗಳೂರು : ಉಗ್ರರ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್ ನಲ್ಲೂ ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಸಂಶಯಾಸ್ಪದ ಹೇಳಿಕೆಯ ಬಗ್ಗೆ ಪ್ರಧಾನಿ ಮೋದಿಯವರು ಸ್ಪಷ್ಟೀಕರಣ ನೀಡಬೇಕು ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.


ಬುಧವಾರ ಚಿತ್ರದುರ್ಗದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು,’ ಉಗ್ರರ ಮೇಲೆ ಭಾರತದ ವಾಯುಸೇನೆ ದಾಳಿಯ ಪರಿಣಾಮ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಲೋಕಸಭೆ ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಉಗ್ರರ ನೆಲೆಗಳ ಮೇಲೆ ಯಶಸ್ವಿಯಾಗಿ ನಡೆದ ಏರ್ ಸ್ಟ್ರೈಕ್ ನಿಂದಾಗಿ ದೇಶದಲ್ಲಿ ಬಿಜೆಪಿ ಪರ ಉತ್ತಮ ಅಲೆಯಿದೆ. ಭಾರತದಲ್ಲಿ ಇಂದಿನ ವಾತಾವರಣ ಭಾರತೀಯ ಜನತಾ ಪಕ್ಷದ ಪರವಾಗಿದೆ. ಅಲ್ಲದೇ 40 ವರ್ಷದ ಬಳಿಕ ಉಗ್ರ ನೆಲೆಗಳನ್ನು ಉಡೀಸ್ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಪರ ಅಲೆ ಇದೆ’ ಎಂದು ಹೇಳಿದ್ದಾರೆ.


ಬಿಎಸ್‍ವೈ ಈ ಹೇಳಿಕೆಯ ಸಮೇತ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಸಾವಿನಲ್ಲಿ ರಾಜಕೀಯ ಲಾಭ ಕಾಣುತ್ತಿರುವ ಬಿಎಸ್‍ವೈ ಅವರ ಹೇಳಿಕೆ ಅಧಿಕಾರದಲ್ಲಿರುವ ಕೇಂದ್ರ ಸರ್ಕಾರ ಉದ್ದೇಶದ ಬಗ್ಗೆ ಸಂಶಯ ಹುಟ್ಟುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಇದಕ್ಕೆ ಸ್ಪಷ್ಟೀಕರಣ ನೀಡಬೇಕು’ ಎಂದು ಒತ್ತಾಯಿಸಿ ಈ ಟ್ವೀಟನ್ನು ಯಡಿಯೂರಪ್ಪ, ಬಿಜೆಪಿ ಇಂಡಿಯಾ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಯಾಗ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments