Select Your Language

Notifications

webdunia
webdunia
webdunia
webdunia

ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ

ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು- ಸಿದ್ದರಾಮಯ್ಯ
ಹುಬ್ಬಳ್ಳಿ , ಸೋಮವಾರ, 25 ನವೆಂಬರ್ 2019 (10:56 IST)
ಹುಬ್ಬಳ್ಳಿ : ಉಪಚುನಾವಣೆಯಲ್ಲಿ ಬಿಜೆಪಿ 8 ಸ್ಥಾನ ಗೆಲ್ಲದಿದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಜೆಪಿ ಕುದುರೆ ವ್ಯಾಪಾರ ಮಾಡಿ ಚುನಾವಣೆ ಮಾಡ್ತಿದ್ದಾರೆ. ಬಿಜೆಪಿ ಅತಂತ್ರವಾದರೆ ಜೆಡಿಎಸ್ ಬೆಂಬಲ ನೀಡಲ್ಲ ಎಂದು ನನಗೆ ಗೊತ್ತಿದೆ. ಯಾಕೆಂದರೆ ನಾನು ಜೆಡಿಎಸ್ ನಿಂದ ಬಂದವನು’ ಎಂದು ಹೇಳಿದ್ದಾರೆ.

 

‘ಇದೇ ಕಾರಣಕ್ಕೆ ಬಿಎಸ್ ವೈ 15 ಸ್ಥಾನ ಗೇಲ್ತೀವಿ ಅಂತಾರೆ. ಸಿಎಂ ವಿಚಲಿತರಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರ ಪತನವಾದರೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರೋ ಸಾಧ್ಯತೆ ಇದೆ. ಮಧ್ಯಂತರ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ದೊರೆಯಲಿದೆ. ಮುಂದೆ ನಾನೇ ಸಿಎಂ ಆಗೋ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತಾರೆ ಎಂದು ಅವರು ತಿಳಿಸಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ವಿಶ್ವನಾಥ್ ರನ್ನು ತರಾಟೆಗೆ ತೆಗೆದುಕೊಂಡ ಮತದಾರರು