Select Your Language

Notifications

webdunia
webdunia
webdunia
webdunia

ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿದ್ದೇ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ

ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿದ್ದೇ ಯಡಿಯೂರಪ್ಪ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 10 ಏಪ್ರಿಲ್ 2017 (15:03 IST)
ಚುನಾವಣೆಗಳಲ್ಲಿ ಆಕ್ರಮ ಆರಂಭಿಸಿರುವುದೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ. ಅವರು ಚುನಾವಣೆ ಆಕ್ರಮದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 
ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಆಪರೇಶನ್ ಕಮಲ ನಡೆಸುವ ಮೂಲಕ ಕೋಟಿ ಕೋಟಿ ರೂಪಾಯಿಗಳನ್ನು ಹಂಚಿದರು. ಇಂತಹ ಯಡಿಯೂರಪ್ಪ ಇದೀಗ ಅಕ್ರಮದ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದರು.
 
ಬಿಎಸ್‌ವೈ ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿರಲಿಲ್ಲ. ಇದೀಗ ರೈತರ ಸಾಲ ಮನ್ನಾ ಮಾಡುವಂತೆ ನಾಟಕವಾಡುತ್ತಿದ್ದಾರೆ. ರೈತರಿಗೆ ಹೆಚ್ಚಿನ ಸಾಲ ನೀಡಿರುವುದು ಕೇಂದ್ರದ ಎನ್‌ಡಿಎ ಸರಕಾರ. ಆದ್ದರಿಂದ, ಎನ್‌ಡಿಎ ಸರಕಾರವೇ ರೈತರ ಸಾಲ ಮನ್ನಾ ಮಾಡಲಿ ಎಂದರು.
 
ನಮ್ಮ ಇತಿಮಿತಿಯಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತ್ಸೆ ಪ್ರೀತ್ಸೆ ಎಂದು ಕಾಡಿ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್