Select Your Language

Notifications

webdunia
webdunia
webdunia
webdunia

ಉಪಚುನಾವಣೆ ಫಲಿತಾಂಶ ದಿಕ್ಸೂಚಿಯಲ್ಲ: ಉಲ್ಟಾ ಹೊಡೆದ ಬಿಎಸ್‌ವೈ

ಉಪಚುನಾವಣೆ ಫಲಿತಾಂಶ ದಿಕ್ಸೂಚಿಯಲ್ಲ: ಉಲ್ಟಾ ಹೊಡೆದ ಬಿಎಸ್‌ವೈ
ಬೆಂಗಳೂರು , ಗುರುವಾರ, 13 ಏಪ್ರಿಲ್ 2017 (19:22 IST)
ಉಪಚುನಾವಣೆ ಪ್ರಚಾರದಲ್ಲಿ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಗುಡುಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇದೀಗ ಉಲ್ಟಾ ಹೊಡೆದಿದ್ದಾರೆ. 
 
ಉಪಚುನಾವಣೆ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನೆಡೆಯಾಗಿದೆ. ಮತದಾರರು ನೀಡಿದ ತೀರ್ಪನ್ನು ಗೌರವಿಸುತ್ತೇವೆ. ಆದರೆ, ಇಂತಹ ತೀರ್ಪು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.
 
ಉಪಚುನಾವಣೆಯ ಫಲಿತಾಂಶದ ಕುರಿತು ಚರ್ಚೆ ನಡೆಸಿ ಮುಂಬರುವ ಚುನಾವಣೆಗೆ ಯಾವ ರೀತಿ ರಣತಂತ್ರ ರೂಪಿಸಬೇಕು ಎನ್ನುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅಧಿಕಾರ ಬಲ, ಹಣಬಲದಿಂದಾಗಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಇಂತಹವರಿಗೆ ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ನೋಂದಣಿ ಮಹಿಳೆಯರ ಹೆಸರಿನಲ್ಲಾಗಲಿ: ಪ್ರಧಾನಿ ಮೋದಿ