Webdunia - Bharat's app for daily news and videos

Install App

ಉಪಚುನಾವಣೆ ಫಲಿತಾಂಶ ದಿಕ್ಸೂಚಿಯಲ್ಲ: ಉಲ್ಟಾ ಹೊಡೆದ ಬಿಎಸ್‌ವೈ

Webdunia
ಗುರುವಾರ, 13 ಏಪ್ರಿಲ್ 2017 (19:22 IST)
ಉಪಚುನಾವಣೆ ಪ್ರಚಾರದಲ್ಲಿ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಗುಡುಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇದೀಗ ಉಲ್ಟಾ ಹೊಡೆದಿದ್ದಾರೆ. 
 
ಉಪಚುನಾವಣೆ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನೆಡೆಯಾಗಿದೆ. ಮತದಾರರು ನೀಡಿದ ತೀರ್ಪನ್ನು ಗೌರವಿಸುತ್ತೇವೆ. ಆದರೆ, ಇಂತಹ ತೀರ್ಪು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದ್ದಾರೆ.
 
ಉಪಚುನಾವಣೆಯ ಫಲಿತಾಂಶದ ಕುರಿತು ಚರ್ಚೆ ನಡೆಸಿ ಮುಂಬರುವ ಚುನಾವಣೆಗೆ ಯಾವ ರೀತಿ ರಣತಂತ್ರ ರೂಪಿಸಬೇಕು ಎನ್ನುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅಧಿಕಾರ ಬಲ, ಹಣಬಲದಿಂದಾಗಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಇಂತಹವರಿಗೆ ಮುಂಬರುವ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments