Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ನಿನಗೆ ಯೋಗ್ಯತೆಯಿದ್ರೆ ಸಾಲ ಮನ್ನಾ ಮಾಡು: ಬಿಎಸ್‌ವೈ

ಸಿಎಂ ಸಿದ್ದರಾಮಯ್ಯ ನಿನಗೆ ಯೋಗ್ಯತೆಯಿದ್ರೆ ಸಾಲ ಮನ್ನಾ ಮಾಡು: ಬಿಎಸ್‌ವೈ
ಮೈಸೂರು , ಬುಧವಾರ, 5 ಏಪ್ರಿಲ್ 2017 (20:21 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನಿನಗೆ ಯೋಗ್ಯತೆಯಿದ್ರೆ ರೈತರ ಸಾಲ ಮನ್ನಾ ಮಾಡು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
 
ಕಾಂಗ್ರೆಸ್ ಪಕ್ಷ ಚುನಾವಣೆ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿತ್ತು. ಇದೀಗ ಉಲ್ಟಾ ಹೊಡೆದಿದೆ ಎಂದು ಕಿಡಿಕಾರಿದ್ದಾರೆ.
 
ಉತ್ತರಪ್ರದೇಶದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರಕಾರ ರೈತರ ಸಾಲ ಮನ್ನಾ ಮಾಡಿ ಚುನಾವಣೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಿದೆ ಎಂದರು.
 
ಉತ್ತರಪ್ರದೇಶದಲ್ಲಿ ರಾಜ್ಯ ಸರಕಾರ ರೈತರ 1 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡಿದೆ. ಇದರಲ್ಲಿ ಕೇಂದ್ರದ ಯಾವುದೇ ಪಾಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಸ್ಟ್ ಹಾಸಿಗೆ ಮೇಲೆ ಮಲಗಿದ್ದರೆ ಸಾಕು.. ನಿಮಗೆ ಸಿಗುತ್ತೆ ಬರೋಬ್ಬರಿ 11. 2 ಲಕ್ಷ ರೂ. ಹಣ