Select Your Language

Notifications

webdunia
webdunia
webdunia
webdunia

ಡೈರಿ ವಿಷಯದಲ್ಲಿಯೇ ಕಾಂಗ್ರೆಸ್ ಧೂಳಿಪಟವಾಗುತ್ತದೆ: ಯಡಿಯೂರಪ್ಪ

ಡೈರಿ ವಿಷಯದಲ್ಲಿಯೇ ಕಾಂಗ್ರೆಸ್ ಧೂಳಿಪಟವಾಗುತ್ತದೆ: ಯಡಿಯೂರಪ್ಪ
ಬೆಂಗಳೂರು , ಶುಕ್ರವಾರ, 24 ಫೆಬ್ರವರಿ 2017 (13:02 IST)
ಡೈರಿಯಲ್ಲಿರುವ ವಿಷಯಗಳಿಂದಲೇ ಕಾಂಗ್ರೆಸ್ ಪಕ್ಷ ಧೂಳಿಪಟವಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಡೈರಿಯಲ್ಲಿ ಘಟಾನುಘಟಿ ಕಾಂಗ್ರೆಸ್ ಮುಖಂಡರು ಹೆಸರುಗಳು ಬಹಿರಂಗವಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
 
ಡೈರಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಗೋವಿಂದರಾಜು ಮೂರ್ಖತನದ ಮಾತುಗಳನ್ನು ಹೇಳುತ್ತಿದ್ದಾರೆ. ಡೈರಿಯನ್ನು ಯಾರೂ ತಂದು ಮನೆಯಲ್ಲಿಟ್ಟು ಹೋಗುವುದಿಲ್ಲ ಎಂದು ಲೇವಡಿ ಮಾಡಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ ಸಹದ್ಯೋಗಿಗಳು ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಒಂದು ಸಾವಿರ ಕೋಟಿ ರೂಪಾಯಿ ನೀಡಿದ್ದಾರೆ ಎನ್ನುವ ನನ್ನ ಆರೋಪಕ್ಕೆ ಡೈರಿಯಲ್ಲಿರುವ ವಿಷಯಗಳು ಪುಷ್ಠಿ ನೀಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಭಾರತೀಯ ಜೀವ ವಿಮಾ ನಿಗಮದ ಎಂಡಿಯಾಗಿ ಭಾರ್ಗವ