Select Your Language

Notifications

webdunia
webdunia
webdunia
webdunia

ಅತೃಪ್ತ ನಾಯಕ ಈಶ್ವರಪ್ಪಗೆ ಯಡಿಯೂರಪ್ಪ ಭರ್ಜರಿ ಟಾಂಗ್

ಅತೃಪ್ತ ನಾಯಕ ಈಶ್ವರಪ್ಪಗೆ ಯಡಿಯೂರಪ್ಪ ಭರ್ಜರಿ ಟಾಂಗ್
ಮೈಸೂರು , ಶುಕ್ರವಾರ, 5 ಮೇ 2017 (15:39 IST)
ನಾಳೆ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ನಡೆಯಲಿರುವ ವಿವಿಧಗೋಷ್ಠಿಗಳಲ್ಲಿ ಈಶ್ವರಪ್ಪಗೆ ಸ್ಥಾನ ದೊರೆಯದಂತೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.
 
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ಯಡಿಯೂರಪ್ಪ, ಈಶ್ವರಪ್ಪಗೆ ಕೊಕ್ ನೀಡಿ ಮಾಜಿ ಸಿಎಂ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ಅವಕಾಶ ನೀಡಿದ್ದಾರೆ.
 
ಯಡಿಯೂರಪ್ಪ ಮತ್ತು ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದ್ದು, ಮುಂಬರುವ ಚುನಾವಣೆಯ ಮೇಲೆ ಯಾವ ರೀತಿ ಪ್ರಭಾವ ಬೀರುತ್ತದೆಯೋ ಕಾದು ನೋಡಬೇಕಾಗಿದೆ.
 
ಎಲ್ಲಾ ಗೋಷ್ಠಿಗಳಿಂದ ಕೊಕ್ ನೀಡಿರುವ ಬಗ್ಗೆ ಸುದ್ದಿಗಾರರು ಈಶ್ವರಪ್ಪರನ್ನು ಪ್ರಶ್ನಿಸಿದಾಗ, ನಿಮಗೆ ಮಾಡೋಕೆ ಕೆಲ್ಸ ಇಲ್ಲವಾ?ನಾನು ಇಂತಹ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಎಲ್ಲಿಗೆ ಬೇಕಾದ್ರೂ ಹೋಗ್ತೇನೆ, ಫಾಲೋ ಮಾಡಿದ್ರೆ ಸರಿ ಇರಲ್ಲ: ಈಶ್ವರಪ್ಪ