Select Your Language

Notifications

webdunia
webdunia
webdunia
webdunia

ಮೈತ್ರಿಯ ಬೆನ್ನಲ್ಲೇ ಯಡಿಯೂರಪ್ಪ ದೆಹಲಿ ಕಡೆಗೆ

ಮೈತ್ರಿಯ ಬೆನ್ನಲ್ಲೇ ಯಡಿಯೂರಪ್ಪ ದೆಹಲಿ ಕಡೆಗೆ
ಬೆಂಗಳೂರು , ಬುಧವಾರ, 13 ಸೆಪ್ಟಂಬರ್ 2023 (09:03 IST)
ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನಡುವೆ ದೋಸ್ತಿ ಕುದುರ್ತಿರೋ ಹೊತ್ತಲ್ಲಿಯೇ ಮಾಜಿ ಸಿಎಂ ಯಡಿಯೂರಪ್ಪ ದೆಹಲಿಗೆ ಹೊರಟುನಿಂತಿದ್ದಾರೆ.

ಬುಧವಾರ ವರಿಷ್ಠರನ್ನು ಭೇಟಿ ಮಾಡಲಿರುವ ಮಾಜಿ ಸಿಎಂ, ಮೈತ್ರಿ ಸೇರಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಎಷ್ಟು ಕ್ಷೇತ್ರಗಳನ್ನು ಉಳಿಸಿಕೊಂಡ್ರೆ ಉತ್ತಮ, ಎಷ್ಟು ಸೀಟ್ಗಳನ್ನು ಪಡೆಯಬೇಕು..? ಎಲ್ಲೆಲ್ಲಿ ಪಕ್ಷದ ಸ್ಥಿತಿಗತಿ ಹೇಗಿದೆ ಎಂಬೆಲ್ಲಾ ವಿಚಾರಗಳ ಬಗ್ಗೆ ಯಡಿಯೂರಪ್ಪ ವರದಿ ಸಲ್ಲಿಸಲಿದ್ದಾರೆ.

ಇತ್ತ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿಯೂ ದೋಸ್ತಿ ರಾಜಕಾರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆದಿದೆ. ಲೋಕಸಭೆ ಚುನಾವಣೆ ತಯಾರಿ, ಪಕ್ಷ ಸಂಘಟನೆ, ರಾಜ್ಯ ಪ್ರವಾಸ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸುವುದು.. ಪರಿಷತ್ ಚುನಾವಣೆ.. ಹೀಗೆ ಹಲವು ವಿಚಾರಗಳ ಬಗ್ಗೆ ಬಿಜೆಪಿ ಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ.

ಸಭೆಯಲ್ಲಿ ಕೆಲವರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನಾಳೆಯೂ ಸಭೆ ನಡೆಯಲಿದೆ. ಅಸಹಾಯಕರು ಮೈತ್ರಿ ಮಾಡ್ಕೊಳ್ತಿದ್ದಾರೆ ಎಂಬ ಶೆಟ್ಟರ್ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇನ್ಮುಂದೆ ಸಿಬ್ಬಂದಿಗೆ ಬೂತಲ್ಲೇ ಅಂಚೆ ಮತದಾನ ಕಡ್ಡಾಯ