Select Your Language

Notifications

webdunia
webdunia
webdunia
webdunia

ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿದ್ದು ತಪ್ಪಾ?: ಸಿಎಂ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿದ್ದು ತಪ್ಪಾ?: ಸಿಎಂ ವಿರುದ್ಧ ಬಿಎಸ್‌ವೈ ವಾಗ್ದಾಳಿ
ಬೆಂಗಳೂರು , ಸೋಮವಾರ, 17 ಜುಲೈ 2017 (15:20 IST)
ಪರಪ್ಪನ ಅಗ್ರಹಾರ ಜೈಲಿನಲ್ಲಿನ ಅವ್ಯವಹಾರ ಬಯಲಿಗೆಳೆದಿರುವುದು ತಪ್ಪಾ? ತಮಿಳುನಾಡಿನ ಎಐಎಢಿಎಂಕೆ ನಾಯಕಿ ಶಶಿಕಲಾಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ವರದಿ ಸಲ್ಲಿಸಿರುವುದು ತಪ್ಪಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ನೋಡಿ ಕಣ್ಣುಮುಚ್ಚಿಕೊಂಡಿರಬೇಕಾಗಿತ್ತಾ? ಸತ್ಯ ವರದಿ ಮಾಡಿದ್ದಕ್ಕೆ ವರ್ಗಾವಣೆ ಶಿಕ್ಷೆ ಎನ್ನುವುದಾದರೇ ಮುಂದೆ ಯಾವ ಅಧಿಕಾರಿಯೂ ಪ್ರಾಮಾಣಿಕವಾಗಿ ವರದಿ ನೀಡುವುದಿಲ್ಲ ಎಂದು ಕಿಡಿಕಾರಿದ್ದಾರೆ. 
 
ರಾಜ್ಯ ಸರಕಾರ ಪ್ರಾಮಾಣಿಕ ಅಧಿಕಾರಿಗೆ ವರ್ಗಾವಣೆ ಮಾಡಿ ನಿಷ್ಠಾವಂತ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿದೆ ಎಂದು ಗುಡುಗಿದ್ದಾರೆ. 
 
ಸರಕಾರ ಪ್ರಾಮಾಣಿಕರಿಗೆ ಶಿಕ್ಷೆ ಕೊಟ್ಟು ಭ್ರಷ್ಟರಿಗೆ ರಕ್ಷಣೆ ಕೊಡುತ್ತಿದೆ. ಇಂತಹ ಸರಕಾರಕ್ಕೆ ಜನತೆಯೇ ಮುಂದೆ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಂದು ಎಚ್ಚರಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

`ಒಂದು ದಿನವಾದರೂ ನನ್ನನ್ನ ಜೈಲಿಗೆ ಹಾಕಲು ನಿರ್ಧರಿಸಿದ್ದರು.