Webdunia - Bharat's app for daily news and videos

Install App

ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನ ಸ್ವಾಗತಿಸಿದ ಯಡಿಯೂರಪ್ಪ

geetha
ಶನಿವಾರ, 27 ಜನವರಿ 2024 (15:22 IST)
ಬೆಂಗಳೂರು-ನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ ಶಾಮನೂರು ಶಿವಶಂಕರಪ್ಪ ಹೇಳಿಕೆಯನ್ನ ಸ್ವಾಗತಿಸಿದ್ದಾರೆ.ಶಾಮನೂರು ಅವರು ನಮ್ಮ ಸಮಾಜದ ಹಿರಿಯ ಮುಖಂಡರು.ರಾಘವೇಂದ್ರ ಮಾಡಿರುವ ಕೆಲಸ ಮೆಚ್ಚಿ ಅವರನ್ನು ಪುನರಾಯ್ಕೆ ಮಾಡಬೇಕೆಂದು ಹೇಳಿರೋದು ನಮ್ಮ ಸಮಾಜದ ಬಂಧುಗಳಿಗೆ, ಕಾರ್ಯಕರ್ತರಿಗೆ ಸಂತೋಷ ತಂದಿದೆ.ಶಾಮನೂರು ಅವರಂಥ ಹಿರಿಯರು ಆಶೀರ್ವಾದ ಮಾಡಿರೋದು ಸಂತೋಷ ಅದಕ್ಕಾಗಿ ಅವರಿಗೆ ಅಭಿನಂದನೆ ತಿಳಿಸ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
 
ಇನ್ನೂ ರಾಮ ಮಂದಿರ ಉದ್ಘಾಟನೆ ಆಗಿದೆ.. ನರೇಂದ್ರ ಮೋದಿ ನೇತೃತ್ವದಲ್ಲಿ ಆಗಿರೋದು ಹೆಮ್ಮೆಯ ವಿಷಯ.ಮೈಸೂರಿನಿಂದ ರಾಮಲಲ್ಲಾ ಮೂರ್ತಿ ತಯಾರಾಗಿರೋದು ವಿಶೇಷ.ಭಾರತ ‌ನಂ.1 ಸ್ಥಾನಕ್ಕೆ ತಲುಪಲಿದೆ.ಲೋಕಸಭಾ ಚುನಾವಣೆ ನಮಗೆಲ್ಲಾ ಸತ್ವ ಪರೀಕ್ಷೆ ಆಗಿದೆ.ಕಳೆದ ಚುನಾವಣೆಯಲ್ಲಿ 26 ಸಂಸದರ ಆಯ್ಕೆ ಆಗಿದೆ.ಈ‌ಬಾರಿ‌ 28ಕ್ಕೆ 28 ಸ್ಥಾನ‌ಗೆದ್ದು ಮೋದಿ ಅವರಿಗೆ‌ಕೊಡುಗೆ ನೀಡಬೇಕಿದೆ.
 
ಜಗದೀಶ್ ಶೆಟ್ಟರ್ ವಾಪಸ್ ಬಂದಿರೋದು ಪಕ್ಷಕ್ಕೆ ‌ಬಲ ತಂದಿದೆ.ಕಾಂಗ್ರೆಸ್ ನಲ್ಲಿ ಕಚ್ಚಾಟ ಜಾಸ್ತಿಯಾಗಿದೆ.ಜನ ಯಾಕಾದರೂ ಕಾಂಗ್ರೆಸ್ ಆಯ್ಕೆ ಮಾಡಿದ್ವಿ ಎಂದು‌ ಬೇಸತ್ತಿದ್ದಾರೆ.ಭಾರತವನ್ನು ಬಲಿಷ್ಠಗೊಳಿಸಲು ಈ ಚುನಾವಣೆ ಅನಿವಾರ್ಯ ಮೋದಿ ಅವರನ್ನ ಮತ್ತೆ ಪ್ರಧಾನಿಯಾಗಿ ಮಾಡೋಣ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments