85 ನೇ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿದ ಯಡಿಯೂರಪ್ಪ

Webdunia
ಬುಧವಾರ, 5 ಫೆಬ್ರವರಿ 2020 (15:47 IST)
ಕಲಬುರಗಿಯಲ್ಲಿ ನಡೆಯುತ್ತಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

 ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿನ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ನುಡಿ ಹಬ್ಬಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಕಲಬುರಗಿ ಭಾವ್ಯಕ್ಯತೆಯ ತಾಣ. ನಾಡಿನ ಆರುವರೆ ಕೋಟಿ ಜನರಿಗೆ ಧನ್ಯಾವಾದ ಹೇಳುವೆ. ಸಾಂಸ್ಕೃತಿಕ ಕಲೆಯು ಕಲಬುರಗಿಯಲ್ಲಿ ವಿಭಿನ್ನವಾಗಿದೆ. ಶರಣರು, ಸಂತರ ನಾಡು. ಇಂಥ ಮಹತ್ವದ ನಾಡಿನಲ್ಲಿ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿ‌. ತೊಗರಿ ಖಣಜ ಖ್ಯಾತಿಯ ನಾಡಿನಲ್ಲಿ‌ ಇದೀಗ ನಾಲ್ಕನೇ ಬಾರಿ ಸಮ್ಮೇಳನ ನಡೆಯುತ್ತಿದೆ.

ನಾಡು, ನುಡಿ ರಕ್ಷಣೆಗೆ ನಮ್ಮ ಸರಕಾರ ಬದ್ಧವಾಗಿದೆ. ಕಾವ್ಯ, ನಾಟಕ, ಸಾಹಿತ್ಯದಲ್ಲಿ ಛಾಪು ಮೂಡಿಸಿರುವ ಡಾ.ಎಚ್.ಎಸ್.ವೆಂಕಟೇಶ ಮೂರ್ತಿ ಸಮ್ಮೇಳನಾಧ್ಯಕ್ಷರಾಗಿರುವದು ಅತ್ಯಂತ ಸ್ವಾಗತಾರ್ಹ ವಿಷಯ ಎಂದರು.

ಹೈದ್ರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಗಿದೆ. 371 ಜೆ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ, ಉದ್ಯೋಗಾಂಕ್ಷಿಗಳಿಗೆ ಹೆಚ್ಚು ಅನುಕೂಲವಾಗಲಿದೆ. ಕಲಬುರಗಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದ್ದು, ಜಿಲ್ಲೆ ವಾಣಿಜ್ಯಕವಾಗಿ ಬೆಳವಣಿಗೆಯಾಗಲಿದೆ ಎಂದರು.

ಕನ್ನಡ ಭಾಷೆ, ನುಡಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಸರಕಾರಿ ಶಾಲೆಗಳನ್ನು ಬಲಿಷ್ಠಗೊಳಿಸಲಾಗುತ್ತಿದೆ. ಪೋಷಕರು ಸರಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಲು ಮುಂದಾಗಬೇಕೆಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments