Webdunia - Bharat's app for daily news and videos

Install App

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

Krishnaveni K
ಮಂಗಳವಾರ, 25 ನವೆಂಬರ್ 2025 (09:23 IST)
ಬೆಂಗಳೂರು: ರಾಜ್ಯದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಸಿಎಂ ಕುರ್ಚಿಗಾಗಿ ಒಳಗೊಳಗೇ ತಿಕ್ಕಾಟವಾಗುತ್ತಿದೆ. ಇದರ ನಡುವೆ ಯಡಿಯೂರಪ್ಪನವರು ಸದನದಲ್ಲಿ ಅಂದೇ ನುಡಿದಿದ್ದ ಡಿಕೆಶಿ ಭವಿಷ್ಯ ಈಗ ವೈರಲ್ ಆಗ್ತಿದೆ.

ಈ ಹಿಂದೆ ಆರು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಬಳಿಕ ಸಂಖ್ಯಾಬಲ ಸಾಬೀತುಪಡಿಸಲು ವಿಫಲರಾಗಿ ಅಧಿಕಾರ ಕಳೆದುಕೊಂಡಾಗ ಸದನದಲ್ಲಿ ಭಾಷಣ ಮಾಡಿದ್ದರು. ಆಗ ನಗುತ್ತಾ ಕೂತಿದ್ದ ಡಿಕೆ ಶಿವಕುಮಾರ್ ಬಳಿ ನೀವು ಅಲ್ಲಿದ್ದರೆ ಸಿಎಂ ಆಗುತ್ತೀರಾ ಎಂದು ಪ್ರಶ್ನಿಸಿದ್ದರು. ಆಗ ಡಿಕೆಶಿ ನಗುತ್ತಿದ್ದರು, ಯಡಿಯೂರಪ್ಪ ಗಂಭೀರವಾಗಿದ್ದರು.

ಈಗ ಡಿಕೆ ಶಿವಕುಮಾರ್ ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಲ್ಲಿ ಹೆಣಗಾಡುವುದನ್ನು ನೋಡಿದರೆ ನೆಟ್ಟಿಗರು ಯಡಿಯೂರಪ್ಪನವರ ಅದೇ ಮಾತನ್ನು ವೈರಲ್ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿದ್ದಷ್ಟು ದಿನವೂ ಡಿಕೆಶಿಗೆ ಸಿಎಂ ಆಗುವುದು ಸುಲಭದ ಮಾತಲ್ಲ ಎನ್ನುತ್ತಿದ್ದಾರೆ.

ಒಂದು ವೇಳೆ ಬೇರೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರೆ ಅಥವಾ ಹೊಂದಾಣಿಕೆ ಮಾಡಿಕೊಂಡಿದ್ದರೆ ಡಿಕೆಶಿ ಎಂದೋ ಸಿಎಂ ಆಗುತ್ತಿದ್ದರು. ಆದರೆ ಡಿಕೆ ಶಿವಕುಮಾರ್ ಎಂದಿಗೂ ಪಕ್ಷಕ್ಕೆ ನಿಷ್ಠರಾಗಿಯೇ ಇದ್ದವರು. ಹೀಗಾಗಿ ಅವರ ಕನಸು ಇನ್ನೂ ಈಡೇರಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments