Select Your Language

Notifications

webdunia
webdunia
webdunia
webdunia

ಅಗಲಿದ ವಸಂತ ಬಂಗೇರ ಜತೆಗಿನ ಹೋರಾಟದ ನೆನಪನ್ನು ಸ್ಮರಿಸಿಕೊಂಡ ಯಡಿಯೂರಪ್ಪ

K Vsantha Bangera

Sampriya

ಬೆಂಗಳೂರು , ಬುಧವಾರ, 8 ಮೇ 2024 (19:00 IST)
‌‌
Photo Courtesy X
ಬೆಂಗಳೂರು: ಅಲ್ಪಕಾಲದ ಅನಾರೋಗ್ಯದಿಂದ ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ಅಗಲಿಕೆಗೆ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಬಿಎಸ್‌ವೈ ಅವರು, ಅನೇಕ ವರ್ಷಗಳ ಹಿಂದೆ ವಿಧಾನಸಭೆಯಲ್ಲಿ ನಾನು ಮತ್ತು ವಸಂತ ಬಂಗೇರ ಮಾತ್ರ ಪಕ್ಷದಿಂದ ಶಾಸಕರಾಗಿ ಗೆದ್ದು ಬಂದ ಹೋರಾಟದ ಕ್ಷಣಗಳನ್ನು ಸ್ಮರಿಸಿಕೊಂಡರು.

ಎಕ್ಸ್‌ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಾಗಿ, ಐದು ಬಾರಿ ಬೆಳ್ತಂಗಡಿಯಿಂದ ಶಾಸಕರಾಗಿ ಆಯೆಯಾಗಿದ್ದ ಶ್ರೀ ಕೆ.ವಸಂತ ಬಂಗೇರ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅನೇಕ ವರ್ಷಗಳ ಹಿಂದೆ ವಿಧಾನಸಭೆಯಲ್ಲಿ ನಾನು ಮತ್ತು ಶ್ರೀ ವಸಂತ ಬಂಗೇರ ಮಾತ್ರ ಪಕ್ಷದಿಂದ ಶಾಸಕರಾಗಿ ಗೆದ್ದ ಸಂದರ್ಭದ ಆ ಹೋರಾಟದ ದಿನಗಳನ್ನು ನಾನೆಂದಿಗೂ ಮರೆಯಲಾರೆ. ಆ ಹಿರಿಯ ಚೇತನಕ್ಕೆ ಸದ್ಗತಿ ಪ್ರಾರ್ಥಿಸುತ್ತಾ ಅವರ ಕುಟುಂಬದವರಲ್ಲಿ ನನ್ನ ತೀವ್ರ ಸಂತಾಪಗಳನ್ನು ಸಲ್ಲಿಸುತ್ತೇನೆ. ಓಂ ಶಾಂತಿ

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆ ವಸಂತ ಬಂಗೇರ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಧೀಮಂತ ನಾಯಕನ ಅಗಲಿಕೆ ರಾಜಕೀಯ ಗಣ್ಯರು ಸಂತಾಪವನ್ನು ಸೂಚಿಸುತ್ತಿದ್ದಾರೆ.

ನಾಳೆ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

'ನಾನು ಕಪ್ಪು ಬಣ್ಣದ ಭಾರತೀಯ': ಫೋಟೋ ಹಂಚಿ ಪಿತ್ರೋಡಾ ಹೇಳಿಕೆಗೆ ಅಣ್ಣಾಮಲೈ ತಿರುಗೇಟು