Select Your Language

Notifications

webdunia
webdunia
webdunia
webdunia

ಸಿಎಂ, ಪುತ್ರ ಡಾ. ಯತೀಂದ್ರ ಸೋಲುವುದನ್ನೇ ಜನ ಕಾಯ್ತಿದ್ದಾರೆ: ಯಡಿಯೂರಪ್ಪ

ಸಿಎಂ, ಪುತ್ರ ಡಾ. ಯತೀಂದ್ರ ಸೋಲುವುದನ್ನೇ ಜನ ಕಾಯ್ತಿದ್ದಾರೆ: ಯಡಿಯೂರಪ್ಪ
ಬೆಂಗಳೂರು , ಸೋಮವಾರ, 2 ಏಪ್ರಿಲ್ 2018 (09:28 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಡಾ. ಯತೀಂದ್ರ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಸೋಲುವುದನ್ನೇ ರಾಜ್ಯದ ಜನ ಕಾಯ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತು ಅವರ ಪುತ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ ‘ತಾಕತ್ತಿದ್ದರೆ ಸಿಎಂ ಪುತ್ರ ಡಾ. ಯತೀಂದ್ರ ವರುಣಾದಲ್ಲಿ ಗೆದ್ದು ತೋರಿಸಲಿ’ ಎಂದು ಸವಾಲು ಹಾಕಿದ್ದಾರೆ.

ಸಿಎಂ ಪುತ್ರ ಸ್ಪರ್ಧಿಸುವ ಕ್ಷೇತ್ರಕ್ಕೆ ಬಿಎಸ್ ವೈ ಪುತ್ರ ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಮೊದಲು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧಿಸುವುದಾಗಿ ಸುದ್ದಿ ಬಂದಿತ್ತು. ಆದರೆ ಇದೀಗ ಹಾಲಿ ಸಿಎಂ ಪುತ್ರ ವರ್ಸಸ್ ಮಾಜಿ ಸಿಎಂ ಪುತ್ರ ಆಗಲಿದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸಿಗಬೇಕಷ್ಟೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಸ್ಪೆನ್ಸ್ ಗೆ ಇಂದು ತೆರೆ ಎಳೆಯಲಿದ್ದಾರೆ ಅಂಬರೀಷ್