Publish Date: Thu, 12 Apr 2018 (09:29 IST)
Updated Date: Thu, 12 Apr 2018 (09:31 IST)
ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿದ್ದು, ಅಲ್ಲಿ ಅವರು ಸೋಲುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಜನ ಈಗ ಕಾಂಗ್ರೆಸ್ ನ್ನು ಮನೆಗೆ ಕಳುಹಿಸಲು ಕಾತುರರಾಗಿದ್ದಾರೆ. ವರುಣಾದಲ್ಲಿ ಸಿಎಂ ಪುತ್ರನಿಗೆ ಗೆಲುವು ಸಿಗಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಈಗಾಗಲೇ 72 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅದರ ಪೈಕಿ 68 ಸ್ಥಾನ ಗೆಲ್ಲುವ ಭರವಸೆಯಿದೆ. ಒಟ್ಟಾರೆ 150 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಭರವಸೆ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.