Select Your Language

Notifications

webdunia
webdunia
webdunia
webdunia

ಗುಟ್ಟು ಬಿಟ್ಟು ಕೊಡದ ಯಡಿಯೂರಪ್ಪ

ಗುಟ್ಟು ಬಿಟ್ಟು ಕೊಡದ ಯಡಿಯೂರಪ್ಪ
ಬೆಂಗಳೂರು , ಶನಿವಾರ, 11 ನವೆಂಬರ್ 2017 (09:27 IST)
ಬೆಂಗಳೂರು: ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನ ಮಾನ ಸಿಗದೆ ಅಸಮಾಧಾನಗೊಂಡಿರುವ ಇಬ್ಬರು ಶಾಸಕರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಬಿಜೆಪಿ ಯಶಸ್ವಿಯಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗುಟ್ಟು ಬಿಟ್ಟುಕೊಟ್ಟಿಲ್ಲ.


ಶಾಸಕರಾದ ಡಾ. ಎ.ಬಿ ಮಾಲಕರೆಡ್ಡಿ ಮತ್ತು ಮಾಲೀಕಯ್ಯ ಗುತ್ತೇದಾರ್ ಅವರನ್ನು ಬಿಜೆಪಿಗೆ ಸೆಳೆಯಲು ತಂತ್ರ ರೂಪಿಸಲಾಗಿದೆ ಎನ್ನಲಾಗಿದೆ. ಮಂತ್ರಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಈ ಇಬ್ಬರೂ ಶಾಸಕರು ಕಾಂಗ್ರೆಸ್ ಗೆ ಗುಡ್ ಬೈ ಹೇಳಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.

ಇದೀಗ ಬಿಜೆಪಿ ಇವರನ್ನು ಆಹ್ವಾನಿಸಿದ್ದು, ಡಿಸೆಂಬರ್ ನಲ್ಲಿ ಅಧಿಕೃತವಾಗಿ ಪಕ್ಷ ಸೇರಲು ಸೂಚಿಸಿದೆ ಎನ್ನಲಾಗಿದೆ. ಆದರೆ ಬಿಜೆಪಿಯಿಂದ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟಿಟಿವಿ ದಿನಕರನ್ ತೋಟದ ಮನೆಯಲ್ಲಿ ರಹಸ್ಯ ಕೋಣೆಗಳು ಪತ್ತೆ!