Publish Date: Tue, 23 Jan 2018 (10:31 IST)
Updated Date: Tue, 23 Jan 2018 (10:33 IST)
ಬೆಂಗಳೂರು: ಚುನಾವಣೆಗೆ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಆಪ್ತ ಬಂಟನಿಂದಲೇ ಶಾಕ್ ಸಿಕ್ಕಿದೆ.
ಕೆಜೆಪಿ ಪಕ್ಷ ಸ್ಥಾಪಿಸಿದ್ದಾಗ ಜತೆಯಲ್ಲಿದ್ದ ಯಡಿಯೂರಪ್ಪ ಆಪ್ತ ಮಂಜುನಾಥ ಗೌಡ ಇದೀಗ ಯಡಿಯೂರಪ್ಪನವರಿಗೇ ಕೈಕೊಟ್ಟು ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಪದ್ಮನಾಬ ನಗರದಲ್ಲಿರುವ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಪಕ್ಷದ ನಾಯಕರ ಸಮ್ಮುಖದಲ್ಲೇ ಸೇರ್ಪಡೆಯಾಗಿದ್ದಾರೆ. ಕೆಜೆಪಿಯಲ್ಲಿದ್ದಾಗ ಮಂಜುನಾಥ ಗೌಡ ತೀರ್ಥಹಳ್ಳಿಯಲ್ಲಿ ಚುನಾವಣೆಗೆ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋತಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ